ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಚುನಾವಣೆ ಇದ್ದಾಗ ರಾಜ್ಯಕ್ಕೆ ಬಂದೇ ಬರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಅವರ ಮೈಸೂರು (Mysuru) ಪ್ರವಾಸ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ ಚುನಾವಣೆ ಇದ್ದಾಗ ಬಂದೇ ಬರ್ತಾರೆ. ಪ್ರಧಾನಿಯದ್ದು ಇಷ್ಟರಲ್ಲೇ ಟಿಪಿ ಬರುತ್ತೆ. ಅವರು ಏನ್ ಮಾಡಬೇಕೋ ಮಾಡಲಿ, ನಾವೇನ್ ಮಾಡಬೇಕೋ ಮಾಡ್ತೀವಿ.
ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಧ್ಯಕ್ಷ ಆರಿಫ್ ಅಲ್ವಿ
ಸಂದರ್ಭ ಬಂದಾಗ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಮಾಡ್ತೀವಿ ಎಂದು ಹೇಳಿದ್ದಾರೆ. ನೂರು ನೋಟಿಸ್ ಕೊಟ್ಟರೂ ಹೆದರುವುದಿಲ್ಲ ಎಂಬ ಈಶ್ವರಪ್ಪ (Eshwarappa) ಹೇಳಿಕೆಗೆ ಪ್ರತಿಕ್ರಿಯಿಸಿ, ಈಶ್ವರಪ್ಪ ಅವರನ್ನು ಹೆದರಿಸಲು ಯಾರೂ ಹೋಗಿಲ್ಲ. ಕಾನೂನಿನ ಪ್ರಕಾರ, ನೋಟೀಸ್ ಕೊಟ್ಟಿದ್ದೀವಿ. ಮೊದಲು ಅದಕ್ಕೆ ಸಮಜಾಯಿಷಿ ಕೊಡಲಿ. ಈಶ್ವರಪ್ಪ ಅವರು ಬಹಳ ದೊಡ್ಡವರು, ಹೆದರಿಸೋಕೆ ಆಗುತ್ತಾ? ಎಂದು ತಿರುಗೇಟು ನೀಡಿದ್ದಾರೆ.