ಬೆಂಗಳೂರು: ಹೊಸ ಹೊಸ ಉದ್ಯೋಗ ಸೃಷ್ಟಿಗಾಗಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಭರವಸೆ ನೀಡಿದ್ದರು.
![Demo](https://ainlivenews.com/wp-content/uploads/2023/12/spoorthi-1.jpg)
Post Office Jobs: 10ನೇ ತರಗತಿ ಪಾಸಾಗಿದ್ಯಾ ಇಲ್ಲಿದೆ ಅವಕಾಶ! ತಿಂಗಳಿಗೆ ಕೈ ತುಂಬಾ ಸಂಬಳ
ನಿರುದ್ಯೋಗ ನಮ್ಮ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು.
ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40% ಗೆ ಏರಿಕೆಯಾಗಿದೆ ಎಂದು ವಾಗ್ಧಾಳಿ ಮಾಡಿದ್ದರು
![](https://ainlivenews.com/wp-content/uploads/2024/01/Ad-Banner-copy-scaled.jpg)