ರಾಮನಗರ: ಸಚಿವ ಚಲುವರಾಯಸ್ವಾಮಿ ನನಗೇನು ಎದುರಾಳಿನಾ, ಅವರ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಚಲುವರಾಯಸ್ವಾಮಿ ಸ್ಪರ್ಧೆಯ ಕುರಿತು ಬಿಡದಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಸೋಲಿನ ಬಗ್ಗೆ ಮಾತನಾಡುವವರು ಇವರೇಕೆ ಸೋತಿದ್ರು. ಮಂತ್ರಿ ಆಗಿದ್ದರೂ ಕೂಡಾ ಚಲುವರಾಯಸ್ವಾಮಿ ಸೋತಿದ್ರಲ್ಲ.
Jalebi with milk: ಬಿಸಿ ಹಾಲಿನ ಜೊತೆ ಜಿಲೇಬಿ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ಈಗ ದೇವೇಗೌಡರ ಮುಖ ನೋಡಿಕೊಂಡು ಸುಮ್ಮನಿದ್ದೀನಿ ಅಂದ್ರಲ್ಲಾ? ಇಲ್ಲ ಅಂದರೆ ಏನು ಮಾಡ್ತಿದ್ರಿ. ನಿಮ್ಮ ಮಾತಿನ ಅರ್ಥ ಏನು. ನಾನು ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೀನಿ. ಅವರು ನನಗೇನು ಎದುರಾಳಿನಾ? ಅವರ ಬಗ್ಗೆ ಚರ್ಚೆ ಅಪ್ರಸ್ತುತ. ಅದೇನು ಮಾಡ್ತಿರೋ ಮಾಡಿ ನೋಡೊಣ ಎಂದು ಚಲುವರಾಯಸ್ವಾಮಿಗೆ ಹೆಚ್ಡಿಕೆ ಸವಾಲ್ ಹಾಕಿದ್ದಾರೆ.