ರಾಮನಗರ:- ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಹೆಂಡತಿ ಟೀ ಮಾಡೋದಿಲ್ಲ, ಡಿವೋರ್ಸ್ ಬೇಕು.. ಕೋರ್ಟ್ ಮೆಟ್ಟಿಲೇರಿದ ಗಂಡನಿಗೆ ಸಿಕ್ಕ ತೀರ್ಪು ಏನು!?
ಈ ಸಂಬಂಧ ಮಾತನಾಡಿದ ಅವರು,ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಕುಮಾರಸ್ವಾಮಿ ಉಳಿಸಿಕೊಳ್ಳುತ್ತಾರೆ. ಚನ್ನಪಟ್ಟಣಕ್ಕೆ ಇನ್ನೂ ಬೈ ಎಲೆಕ್ಷನ್ ಘೋಷಣೆ ಆಗಿಲ್ಲ. ಯಾಕಂದ್ರೆ ಹಾಲಿ ಶಾಸಕರು ಇನ್ನೂ ರಾಜೀನಾಮೆ ನೀಡಿಲ್ಲ. ನಮಗೆ ವಿಶ್ವಾಸ ಇದೆ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಬಿಟ್ಟು ಹೋಗಲ್ಲ. ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ. ನಾನು ಸಾಕಷ್ಟು ಬಾರಿ ಅವರ ಮಾತುಗಳನ್ನ ಆಲಿಸಿದ್ದೇನೆ. ಚನ್ನಪಟ್ಟಣ, ರಾಮನಗರ ನನ್ನ ಎರಡು ಕಣ್ಣುಗಳು ಅಂದಿದ್ರು. ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅವರ ಮಾತುಗಳನ್ನ ನೋಡಿದ್ದೇನೆ. ಅಲ್ಲದೇ ಅವರು ಹೃದಯವಂತರು ಕೂಡ. ಹಾಗಾಗಿ ಚನ್ನಪಟ್ಟಣ ಉಳಿಸಿಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ವ್ಯಂಗ್ಯವಾಡಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಬೈಎಲೆಕ್ಷನ್ನಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಸುರೇಶ್ಗೆ ಒತ್ತಾಯಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಕಾರ್ಯಕರ್ತರು, ಡಿ.ಕೆ.ಸುರೇಶ್ ಕಾರಿಗೆ ಮುತ್ತಿಗೆ ಹಾಕಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂದು ಬಿಗಿಪಟ್ಟು ಹಿಡಿದರು.
ಚನ್ನಪಟ್ಟಣದಲ್ಲಿ ನಾವು ನಿರೀಕ್ಷೆಗೂ ಮೀರಿದ ಮತಗಳನ್ನು ಕೊಟ್ಟಿದ್ದೇವೆ. ಚನ್ನಪಟ್ಟಣ ಕ್ಷೇತ್ರದಲ್ಲಿ ನೀವು ಸ್ಪರ್ಧಿಸಿದ್ರೆ ಪಕ್ಷ ಸಂಘಟಿಸಬಹುದು. ಹಾಗಾಗಿ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಡಿಕೆ ಸುರೇಶ್, ಚನ್ನಪಟ್ಟಣದಲ್ಲೇ ಸಮರ್ಥ ಅಭ್ಯರ್ಥಿ ಇದ್ದಾರೆ. ಬೈ ಎಲೆಕ್ಷನ್ಗೆ ಹೈಕಮಾಂಡ್ ಅಚ್ಚರಿ ಅಭ್ಯರ್ಥಿ ಆಯ್ಕೆ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.