ಧಾರವಾಡ: ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರದ ದಿಕ್ಕು, ದಾರಿ ತಪ್ಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಒಬ್ಬರ ವಿರುದ್ಧ ಒಬ್ಬರು ಹೇಳಿಕೆ ಕೊಡಿಸುತ್ತಿದ್ದಾರೆ. ಹೆಚ್ಚು ಡಿಸಿಎಂ ಸ್ಥಾನ ಸೃಷ್ಟಿ ಮಾಡಬೇಕು ಎಂಬ ಒತ್ತಾಯ ಎಬ್ಬಿಸುತ್ತಿದ್ದಾರೆ. ಇದನ್ನು ಸಿಎಂ ತಮ್ಮ ಬಾಲಂಗೋಚಿಗಳ ಕಡೆಯಿಂದ ಹೇಳಿಸುತ್ತಿದ್ದಾರೆ. ಇತ್ತ ಸಿಎಂ ಅವರನ್ನೇ ಬದಲಾವಣೆ ಮಾಡಿಸಬೇಕು ಎಂದು ಡಿಸಿಎಂ ತಮ್ಮ ಹಿಂಬಾಲಕರ ಕಡೆಯಿಂದ ಹೇಳಿಸುತ್ತಿದ್ದಾರೆ ಎಂದರು.
Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ
ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ. ಒಬ್ಬರಿಗೊಬ್ಬರು ತಮ್ಮ ಹಿಂಬಾಲಕರನ್ನು ಬಿಡುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳತ್ತದೆ ಎನ್ನುತ್ತಾರೆ. ಏನು ಹೇಳಿದರೂ ಕ್ರಮ ಆಗಿಲ್ಲ. ಇಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ಬಂದು ತಲುಪಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್ ಹೀಗಾಗಿದೆ. ಗ್ಯಾರಂಟಿ ಕೊಟ್ಟರೂ ಲೋಕಸಭೆಯಲ್ಲಿ ಬಹುಪಾಲು ಬಿಜೆಪಿ ಮುಂದೆ ಇದೆ. ಕಾಂಗ್ರೆಸ್ ಬಗ್ಗೆ ಜನ ಬೇಸತ್ತಿದ್ದಾರೆ. ರಾಜ್ಯದ ಆಡಳಿತ ನಿಷ್ಟ್ರಿಯಗೊಳ್ಳುತ್ತಿದೆ. ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ಕೊಡಲು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಇವರು ಕೂಡಲೇ ತಮ್ಮ ಆಂತರಿಕ ಸಮಸ್ಯೆ ಬಗೆಹರಿಸಿಕೊಂಡು ಜನರ ಕಡೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)