ಜೈಲಿನಲ್ಲೂ ನಟ ದರ್ಶನ್ ಗೆ ಭರ್ಜರಿ ಭೋಜನ: ದೊನ್ನೆ ಬಿರಿಯಾನಿ ತರಿಸಿ ಕೊಟ್ಟ ಪೊಲೀಸರು

ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೇಸೆಜ್ ಮಾಡಿದ್ದಾರೆ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರನ್ನು ದರ್ಶನ್ ಎಂಡ್ ಗ್ಯಾಂಗ್ ಹತ್ಯೆ ಮಾಡಿದೆ. ಸದ್ಯ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು 6 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ. ಈ ವೇಳೆ ಠಾಣೆಗೆ ಹೊರಗಡೆಯಿಂದ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ಬಾಕ್ಸ್​ಗಳು ಬಂದಿವೆ. ಪೊಲೀಸರು ದರ್ಶನ್ ಎಂಡ್ ಗ್ಯಾಂಗ್ ಗೆ ದೊನ್ನೆ ಬಿರಿಯಾನಿ ತರಿಸಿಕೊಟ್ಟಿದ್ದಾರೆ … Continue reading ಜೈಲಿನಲ್ಲೂ ನಟ ದರ್ಶನ್ ಗೆ ಭರ್ಜರಿ ಭೋಜನ: ದೊನ್ನೆ ಬಿರಿಯಾನಿ ತರಿಸಿ ಕೊಟ್ಟ ಪೊಲೀಸರು