ಬಿಗ್ ಬಾಸ್ (Bigg Boss Kannada) ಮನೆಯಿಂದ ಹೊರ ಬಂದ ನಂತರ ಸಂಗೀತಾ ಕುರಿತಾಗಿಯೂ ಹಲವಾರು ವಿಚಾರಗಳನ್ನು ವಿನಯ್ (Vinay) ಹಂಚಿಕೊಂಡಿದ್ದಾರೆ. ಸಂಗೀತಾ ವಿಷಯ ತಗೊಂಡ್ರೆ ಸಂಗೀತಾ ಪಾರ್ವತಿಯಾಗಿ, ಸತಿಯಾಗಿ ನನ್ನ ಜೊತೆಗೆ ನಟಿಸಿದ್ದಳು. ಇಲ್ಲಿ ಬಂದಾಗ, ಮೊದಲ ವಾರದ ನಾಮಿನೇಷನ್ನಲ್ಲಿ ಅವ್ರು ನನ್ನ ಫ್ರೆಂಡ್ಸು, ಹಾಗಾಗಿ ನಾಮಿನೇಟ್ ಮಾಡ್ಬಾರ್ದು ಅಂತ ಇರ್ಲಿಲ್ಲ. ನಾನು ಇಲ್ಲಿಗೆ ಗೇಮ್ ಆಡೋದಿಕ್ಕೆ ಬಂದಿದ್ದೆ. ಅವರು ಮಾಡಿರುವ ತಪ್ಪುಗಳಿಗೆ ನಾಮಿನೇಟ್ ಮಾಡಿದೆ. ಫ್ರೆಂಡ್ಸ್, ಗೊತ್ತಿರೋರು, ಬಿಟ್ಟುಬಿಡೋಣ ಅಂತ ಅಂದುಕೊಳ್ಳಲಿಲ್ಲ. ಅವರಿಬ್ಬರೂ ತಪ್ಪು ಮಾಡಿದ್ರು, ನಾನು ಹೇಳಿದ ಮೇಲೂ ತಪ್ ಮಾಡಿದ್ರು, ನಾಮಿನೇಟ್ ಮಾಡಿದೆ. ಅದರಿಂದ ಅವರು ನನ್ನ ಬಗ್ಗೆ ನಕಾರಾತ್ಮಕವಾಗಿ ತಿಳಿದುಕೊಂಡರು. ಗೊತ್ತಿರೋರನ್ನೇ ನಾಮಿನೇಟ್ ಮಾಡ್ತಾನೆ. ಫ್ರೆಂಡ್ಸ್ನೇ ನಾಮಿನೇಟ್ ಮಾಡ್ತಾನೆ ಎಂದುಕೊಂಡರು.
ಮನೆಯೊಳಗಿನ ಸ್ಪರ್ಧಿಗಳಲ್ಲಿ ಕಾರ್ತೀಕ್ ಒಂದ್ಹತ್ ವರ್ಷಗಳಿಂದ ನನಗೆ ಪರಿಚಯ. ಸಂಗೀತಾ ಏಳು ವರ್ಷಗಳಿಂದ ಪರಿಚಯ, ಯಾಕೆಂದರೆ ಇಬ್ಬರೂ ಒಂದು ಧಾರಾವಾಹಿಯಲ್ಲಿ ಕೆಲಸ ಮಾಡಿದ್ವಿ. ನನಗೆ ಕಾರ್ತಿಕ್ ಗೆ ಅಂಥ ರೈವಲರಿ ಏನಿಲ್ಲ. ಟಾಸ್ಕ್ ಅಂತ ಬಂದಾಗ, ಗೇಮ್ ಅಂತ ಬಂದಾಗ ಮಾತಿಗೆ ಮಾತು ಬಂದೇ ಬರ್ತವೆ. ಹಾಗಾಗಿ ಭಿನ್ನಾಭಿಪ್ರಾಯ ಬರುತ್ತಿದ್ದವು. ಆದರೆ ಬೇಗ ಪರಸ್ಪರ ಮಾತಾಡ್ಕೊಂಡು ಸರಿ ಹೋಗ್ತಿದ್ವಿ. ಈಗಲೂ ನಾನು ಕಾರ್ತಿಕ್ ಒಳ್ಳೆ ಫ್ರೆಂಡ್ಸ್ ಆಗೇ ಇರ್ತೀವಿ ಅಂದಿದ್ದಾರೆ ವಿನಯ್ ಗೌಡ.
ನಾನು ಎಲ್ಲಿಗೂ ಫೇಕ್ ಆಗಿಲ್ಲ. ಯಾರಿಗೆ ಎಷ್ಟು ಬೇಜಾರಾದ್ರೂ ಪರವಾಗಿಲ್ಲ. ಯಾರು ಎಷ್ಟೇ ಅಹಂಕಾರ ಎಂದು ಹೇಳಿದರೂ ಪರವಾಗಿಲ್ಲ. ಯಾರು ಎಷ್ಟೇ ವಿಲನ್ ಅಂದ್ರೂ ಪರವಾಗಿಲ್ಲ… ನಾನದನ್ನು ಒಪ್ಕೋತೀನಿ. ನಾನು ವಿಲನ್ನೇ. ಮನೆಯೊಳಗೆ ಜೆನ್ಯೂನ್ ಆಗಿ ಆಡಿದ್ದು, ನಮ್ರತಾ, ಪವಿ… ಮೈಕಲ್ ಜಂಟಲ್ಮನ್. ಸಿರಿ, ವರ್ತೂರು ಸಂತೋಷ್ ಹೀಗೆ ಬೆರಳೆಣಿಕೆಯಷ್ಟು ಜನರು ಮಾತ್ರವೇ ಜೆನ್ಯೂನ್ ಆಗಿದ್ರು. ಕಾರ್ತಿಕ್, ಸಂಗಿತಾ, ಮತ್ತು ಪ್ರತಾಪ್ ಟಾಪ್ 3ಗೆ ಹೋಗಿದ್ದಾರೆ ಅಂದ್ರೆ ಅದರ ಕ್ರೆಡಿಟ್ ನನಗೇ ಸಲ್ಲಬೇಕು. ಆ ಮೂವರೂ ನನ್ನ ಜೊತೆಗೆ ಜಗಳ ಮಾಡಿಕೊಂಡೇ, ಫೈಟ್ ಮಾಡಿಕೊಂಡೇ ಅಲ್ಲಿಗೆ ತಲುಪಿರುವುದು. ನನಗೆ ಕಾರ್ತೀಕ್ ಗೆಲ್ಲಬೇಕು ಅಂತಲೇ ಆಸೆ ಇತ್ತು.