ತುಮಕೂರು: ಒಂದು ಕೈಯ್ಯಲ್ಲಿ ಕೊಟ್ಟ ಹಾಗೆ ಕೊಟ್ಟು ಇನ್ನೊಂದು ಕೈಯ್ಯಲ್ಲಿ ಕಿತ್ತುಕೊಳ್ಳುತ್ತಿರುವ ಈ ಸರ್ಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ. ಅದಕ್ಕೆ ಈ ಸರ್ಕಾರದ ಗ್ಯಾರಂಟಿಗಳನ್ನು ಪಿಕ್ ಪಾಕೆಟ್ ಗ್ಯಾರಂಟಿಗಳು ಎಂದು ನಾನು ಕರೆದದ್ದು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ -ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಅವರು ಹೇಳಿದರು.
ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ‘ ಪಿಕ್ ಪಾಕೆಟ್ ಸರ್ಕಾರ ‘ ಕೆಲಸ ಮಾಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ನಾನು ಹಿಂದೆ ಎರಡು ಬಾರಿ ಸರ್ಕಾರ ನಡೆಸಿದ್ದೇನೆ. ಜನರಿಗೆ ಏನೆಲ್ಲಾ ಕೊಡುಗೆ ಕೊಟ್ಟಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ವಿಧವಾ ತಾಯಂದಿರಿಗೆ 400 ರೂಪಾಯಿ ಮಾಶಾಸನ, ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಸೈಕಲ್ ಕೊಟ್ಟಿದೇನೆ.
ಎಲೆಕೋಸನ್ನ ವಾರಕ್ಕೊಮ್ಮೆ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಗ್ರಾಮ ವಾಸ್ತವ್ಯಕ್ಕೆ ಬಂದಾಗ ತಾಯಂದಿರು ಸಾರಾಯಿ, ಲಾಟರಿ ನಿಷೇಧ ಮಾಡಿ ಎಂದು ಒತ್ತಾಯ ಮಾಡಿದರು. ಅವರ ಮಾತಿಗೆ ಬೆಲೆ ಕೊಟ್ಟು ನಾನು ಸರ್ಕಾರದ ಖಜಾನೆಗೆ ನಷ್ಟ ಆಗುತ್ತದೆ ಎಂದು ಗೊತ್ತಿದ್ದರೂ ಸಾರಾಯಿ, ಲಾಟರಿ ನಿಷೇಧ ಮಾಡಿದ್ದೇನೆ. ಅಂತಹ ನಾನು ತಾಯಂದಿರಿಗೆ ಅವಮಾನ ಮಾಡುತ್ತೇನೆಯೇ? ಎಂದು ಅವರು ಪ್ರಶ್ನಿಸಿದರು.