ಬೆಂಗಳೂರು: ಮುಡಾ 50:50 ಅನುಪಾತ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದು, ಗೃಹಸಚಿವ ಜಿ. ಪರಮೇಶ್ವರ್ (G. Parameshwar) ಪ್ರತಿಕ್ರಿಯಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ. ಅವರು ಕೇಳ್ತಾರೆ ಅಂತಾ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದು ಹೇಳಿದರು.
Divorce Case: ಯುವ ರಾಜ್ಕುಮಾರ್ ಡಿವೋರ್ಸ್ ಕೇಸ್: ಆಗಸ್ಟ್ 23ಕ್ಕೆ ಮುಂದೂಡಿದ ಕೋರ್ಟ್!
ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ರೆ ಇಲ್ಲೇನೂ ಮಾಡೋ ಆಗಿಲ್ವಾ..?. ಅಸೆಂಬ್ಲಿಯಲ್ಲಿ ಅವರು ಯಾವ ವಿಷಯ ಚರ್ಚೆಗೆ ತಗೋತಾರೋ ಗೊತ್ತಿಲ್ಲ. ಸ್ಪೀಕರ್ ಗೆ ಯಾವ ವಿಚಾರದ ಬಗ್ಗೆ ಲೆಟರ್ ಕೊಡ್ತಾರೋ ನೋಡಬೇಕು. ಬಿಜೆಪಿಯವರಿಗೆ ನಾವು ಉತ್ತರ ಕೊಡ್ತೀವಿ, ಹಿಂಜರಿವುದಿಲ್ಲ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)