ಬೆಂಗಳೂರು: ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ. ಯಾರೂ ಮಿತ್ರರಲ್ಲ ಅನ್ನೋದು ಮತ್ತೊಮ್ಮೆ ಸಾಭೀತಾಗ್ತಿದೆ.. 2019 ರಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನ ಕೆಡವಿದ್ದವರ ಜೊತೆ ಇಂದು ಇದೇ ಡಿ.ಕೆ ಶಿವಕುಮಾರ್, ಸಖ್ಯ ಬೆಳೆಸಲು ಹೊರಟಿದ್ದಾರೆ.. ಇದೀಗ ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ.
ಪ್ರತಿಬಾರಿ ಲೈಂಗಿಕತೆಯ ನಂತರ ತಲೆನೋವು ಕಾಣಿಸಿಕೊಳ್ಳುತ್ತಿದೆಯೇ..? ಇಲ್ಲಿದೆ ಕಾರಣಗಳು
ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರ ಜತೆ ಸಿಎಂ ಸಿದ್ದರಾಮಯ್ಯ ಅವರನ್ನು “ಕಾವೇರಿ”ಯಲ್ಲಿ ಬುಧವಾರ ಭೇಟಿ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕ ಪೊನ್ನಣ್ಣ, ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.