ಬೆಂಗಳೂರು: ಕಡಲೆಕಾಯಿ ಪರಿಷೆ (Kadalekai Parishe) ಹೆಸರಿನಲ್ಲಿ ನಿಯಮ ಮೀರಿ ಸುಂಕ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿತ್ತು ಇದರ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಅವರ ಗಮನಕ್ಕೂ ಸಹ ನೀಡಲಾಗಿತ್ತು
ದೇವಾಲಯದ ಆವರಣದ ಹೊರಗೆ ಕಡಲೆಕಾಯಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳ ಬಳಿ 500 ರೂ. ಹಣ ಪಡೆದು ರಶೀದಿ ನೀಡಲಾಗಿತ್ತು. ಈ ಬಗ್ಗೆ ನಿರಂತರ ವರದಿಯ ಬಳಿಕ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕ್ರಮಕೈಗೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ
ರಶೀದಿಯ ಮೇಲೆ ದೊಡ್ಡ ಬಸವನಗುಡಿ (Basavanagudi) ದೇವಸ್ಥಾನ, ಕಡಲೆಕಾಯಿ ಪರಿಷೆ ಎಂದು ಮುದ್ರಣಗೊಂಡಿದೆ. ಈ ಬಗ್ಗೆ ವಿಚಾರಿಸಿದಾಗ ಪ್ರಸಾದ್ ಎಂಬವರಿಗೆ 2-3 ಲಕ್ಷಕ್ಕೆ ಬಿಡ್ ನೀಡಲಾಗಿದೆ. ಒಂದು ದಿನ ಮಾತ್ರ ಹಣ ವಸೂಲಿಗೆ ಅವಕಾಶ ಇದ್ದು, ಬಿಡ್ ನೀಡಿದ ಮಾತ್ರಕ್ಕೆ 500, 200 ರೂ. ಕಲೆಕ್ಟ್ ಮಾಡುವ ಹಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುವುದಾಗಿ ದೊಡ್ಡ ಗಣಪತಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ್ ಬಾಬು ಮಾಹಿತಿ ನೀಡಿದ್ದಾರೆ.