ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಸೌಂದರ್ಯ ಜಗದೀಶ್ ಬ್ಯುಸಿನೆಸ್ ಪಾರ್ಟನರ್ಸ್ ಮೇಲೆ FIR ದಾಖಲಾಗಿದೆ. ಹೌದು ಕಳೆದ ತಿಂಗಳು ಏ.14ರಂದು ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ನಲ್ಲಿರುವ ನಿವಾಸದಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಹಣಕಾಸಿನ ವಿಚಾರದಲ್ಲಿ ಈ ಸಾವಾಗಿದೆ ಎಂದು ಹೇಳಲಾಗಿತ್ತು.
ಆದ್ರೆ ಅವರ ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿದೆ. ಅದರಲ್ಲಿ ತಮ್ಮ ಸಾವಿಗೆ ಉದ್ಯಮ ಪಾಲುದಾರರಾದ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಅವರೇ ನೇರ ಕಾರಣ ಎಂದು ಉಲ್ಲೇಖ ಮಾಡಿದ್ದಾರೆ. ಸುರೇಶ್ ಮತ್ತು ಹೊಂಬಣ್ಣ ಅವರು ಸೌಂದರ್ಯ ಕನ್ಸ್ಟ್ರಕ್ಷನ್ ಎಂಬ ಉದ್ಯಮದಲ್ಲಿ ಕೋಟ್ಯಂತರ ರೂ. ಹಣವನ್ನು ಹೂಡಿಕೆ ಮಾಡಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Aadhar Card ಬಳಕೆದಾರರಿಗೆ ಎಚ್ಚರಿಕೆ ನೀಡಿದ UIDAI.! ʻಆಧಾರ್ʼ ದುರ್ಬಳಕೆ ಮಾಡಿದ್ರೆ ಕಾದಿದೆ ಕಠಿಣ ಶಿಕ್ಷೆ
ನಂತರ, ತಮ್ಮ ಹಣವನ್ನು ಹಿಂತೆಗೆದುಕೊಂಡು ಕೇವಲ ಜಗದೀಶ್ ಅವರಿಂದ ಹೆಚ್ಚು ಹಣ ಹೂಡಿಕೆ ಮಾಡಿ ಉದ್ಯಮ ನಷ್ಟದಲ್ಲಿದೆ ಎಂದು ತೋರಿಸಿದ್ದಾರೆ. ಲಾಭದ ಹಣವನ್ನೆಲ್ಲಾ ಉದ್ಯಮ ಪಾಲುದಾದರರು ವೈಯಕ್ತಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಸುಮಾರು 60 ಕೋಟಿ ನಷ್ಟವಾಗಿರುವ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಈ ಡೆತ್ ನೋಟ್ ಆಧರಿಸಿ ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)