ಕಲಬುರ್ಗಿ:- ಅದಾಯ ಪ್ರಮಾಣ ಪತ್ರ ಸೇರಿ ಸರ್ಕಾರಿ ದಾಖಲೆಗಳನ್ನ ಮಾಡಿಕೊಡಲು ಹಣ ಸುಲಿಗೆ ಮಾಡುತ್ತಿರುವ ಆರೋಪ ಸಂಬಂಧ ಜಿಲ್ಲೆಯ ನಾಡ ಕಚೇರಿಗಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ನಾಡ ಕಚೇರಿಗಳಲ್ಲಿ ಜನರಿಗೆ ದಾಖಲೆಗಳನ್ನು ನೀಡಲು ಇಂತಿಷ್ಟು ಶುಲ್ಕ ಎಂದು ನಿಗದಿ ಮಾಡಲಾಗಿರುತ್ತದೆ. ಆದರೆ, ಅಧಿಕಾರಿಗಳು, ಸಿಬ್ಬಂದಿ ಜನರಿಗೆ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ, ಈ ಸಂಬಂಧ ಹಲವು ದೂರುಗಳು ಲೋಕಾಯುಕ್ತ ಕಚೇರಿಗೆ ಸಲ್ಲಿಕೆಯಾಗಿದ್ದವು
ದೂರುಗಳು ಬಂದ ಹಿನ್ನೆಲೆ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ನೇತೃತ್ವದಲ್ಲಿ ಕಲಬುರಗಿ ಜಿಲ್ಲೆಯ ಒಂಬತ್ತು ತಾಲೂಕುಗಳ ನಾಡಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.