ಬೆಂಗಳೂರು: ಚಿನ್ನದ ಮಳಿಗೆ ಮೇಲೆ ನಕಲಿ BIS ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಕೆ.ಆರ್ ಪುರದ ಮಹಾಲಕ್ಷ್ಮೀ ಜ್ಯುವೆಲ್ಲರಿನಲ್ಲಿ ನಡೆದಿದೆ.
ಘಟನೆ ಸಂಬಂಧ ಮೂವರು ನಕಲಿ BIS ಅಧಿಕಾರಿಗಳನ್ನ ಪೋಲಿಸರು ಬಂಧಿಸಿದ್ದಾರೆ. ಇನೋವಾ ಕಾರಿನಲ್ಲಿ ಬಂದಿದ್ದ ನಕಲಿ ಅಧಿಕಾರಿಗಳ ಗ್ಯಾಂಗ್, ದಾಳಿ ಮಾಡಿ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡು ಹೋಗಲು ಯತ್ನಿಸಿದ್ದರು ಎನ್ನಲಾಗಿದೆ. ಇನ್ನು, ದಾಳಿ ಹೆಸರಲ್ಲಿ ಸುಮಾರು 40 ನಿಮಿಷ ಸರ್ಚ್ ಮಾಡಿದ್ರು ಎಂದು ತಿಳಿದುಬಂದಿದೆ.
ಪೋಲಿಸರು ಸಂಪತ್ ಕುಮಾರ್, ಜೋಶಿ ಥಾಮಸ್, ಅವಿನಾಶ್, ಸಂದೀಪ್ ಎಂಬಾತರನ್ನ ಬಂಧಿಸಿದ್ದು, ಆರೋಪಿಗಳ ಬಳಿಯಿದ್ದ ಚಿನ್ನವನ್ನ ಜಪ್ತಿ ಮಾಡಿದ್ದಾರೆ, ಈ ಬಗ್ಗೆ ಕೆ ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.