ಬೆಂಗಳೂರು:- ನಕಲಿ ಮೈಸೂರು ಸ್ಯಾಂಡಲ್ ಸೋಪು ತಯಾರಿಕೆ ದಂಧೆ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದದಲ್ಲಿ ಕೆಎಸ್ಡಿಎಲ್ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ರಮ ಆಗಿದೆ ಅಲ್ವಾ ಎಂದಿದ್ದಾರೆ. ಹೌದು ಆಗಿದೆ ಎಂದು ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಇನ್ಮುಂದೆ ಕ್ಯೂ ಆರ್ ಕೋಡ್ ಬಳಸಿ ಪ್ಯಾಕ್ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಮೈಸೂರು ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ನಿಂದ ಕೆಲ ವಸ್ತುಗಳ ಬಿಡುಗಡೆಗೆ ಎಂಬಿಪಿ ಒತ್ತಾಯ ಮಾಡಿದ್ದರು. ಹೆಚ್ಚು ಮಾತನಾಡುವುದಿಲ್ಲ ಬಜೆಟ್ ಪೂರ್ವಭಾವಿ ಸಭೆ ನಡೆಯುತ್ತಿದೆ. ಜ.16ಕ್ಕೆ ಬಜೆಟ್ ಮಂಡಿಸಬೇಕು. ಇದಕ್ಕೆ ತಯಾರಿ ನಡೆಸುತ್ತಿದ್ದೇವೆ. 19 ವೈವಿಧ್ಯಮಯ ಉತ್ಪನ್ನಗಳನ್ನ ಬಿಡುಗಡೆ ಮಾಡಲಾಗಿದೆ. ಅತ್ಯಂತ ಸಂತೋಷದಿಂದ ಎಲ್ಲ ವಸ್ತುಗಳನ್ನು ಬಿಡುಗಡೆ ಮಾಡಿದ್ದೇನೆ. ಯಾವುದೇ ವಸ್ತು ಜನಪ್ರಿಯ ಆಗಬೇಕಂದರೆ ಮಾರುಕಟ್ಟೆ ಸಿಗಬೇಕು. ಒಳ್ಳೆಯ ಗುಣಮಟ್ಟ, ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಹೊಸ ಉತ್ಪನ್ನ ತಯಾರಿ ಮಾಡಬೇಕು ಆಗ ಬಿಕರಿ ಆಗುತ್ತೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಬಂದು 8 ತಿಂಗಳ ಅವಧಿಯಲ್ಲಿ ಸೋಪ್ಸ್ ಆ್ಯಂಡ್ ಡಿಟರ್ಜಂಟ್ ಕಂಪನಿಯ ಮಾರಾಟ ಹೆಚ್ಚಳ ಮಾಡಲಾಗಿದೆ. ಆಗ ಗಂಧದ ಫ್ಯಾಕ್ಟರಿ ಅಂತ ಕರೆಯಲಾಗುತ್ತಿತ್ತು. ನಂತರ ಸೋಪ್ಸ್ ಆ್ಯಂಡ್ ಡಿಟರ್ಜಂಟ್ ಅಂತ ಆಯಿತು. ತದನಂತರ ಮೈಸೂರು ಆ್ಯಂಡ್ ಡಿಟರ್ಜಂಟ್ ಅಂತ ಆಗುತ್ತೆ. ಈ ಹಿಂದೆ ಕೇವಲ ಗಂಧದ ಎಣ್ಣೆ ತಯಾರಿಕೆ ಮಾಡಲಾಗುತ್ತಿತ್ತು. ಈಗ ಜೆಲ್ ಹೆಚ್ಚು ಬೇಡಿಕೆಯಲ್ಲಿದೆ. ಯುವಕರು ಹೆಚ್ಚು ಬಳಕೆ ಮಾಡುತ್ತಾರೆ. ಜನರ ಅಭಿರುಚಿಗೆ ತಕ್ಕಂತೆ ಮಾಡುವುದು ಅವಶ್ಯ ಎಂದು ಹೇಳಿದ್ದಾರೆ.