ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಇಳಿಕೆ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಬಿರು ಬಿಸಿಲಿನ ತಾಪಮಾನಕ್ಕೆ ರೈತರು ಬೆಳೆ ಬಳೆಯಲಾಗದೆ ಪರದಾಡುವಂತಾಗಿತ್ತು, ಆದ್ರೆ, ಕಳೆದ ಒಂದು ತಿಂಗಳಿನಿಂದ ಉತ್ತಮವಾದ ಮಳೆ ಹಾಗೂ ಹೊರ ರಾಜ್ಯಗಳಿಂದಲೂ ತರಕಾರಿ ಬರಲಾರಂಭಿಸಿದೆ. ಪರಿಣಾಮ ತರಕಾರಿ ಬೆಲೆಯಲ್ಲಿ ಇಳಿಕೆ ಕಂಡಿದೆ.
ಜೀರಿಗೆ ನೀರಿಗೆ ಒಂದು ತುಂಡು ಬೆಲ್ಲ ಬೆರೆಸಿ ಸೇವಿಸಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ..!
ಹೌದು, ಕಳೆದ ತಿಂಗಳು ಬೀನ್ಸ್-200 ರೂಪಾಯಿ ಇತ್ತು, ಈಗ 70 ರೂಪಾಯಿಗೆ ಬಂದಿದೆ. ಮೂಲಂಗಿ- 20, ಸೌತೇಕಾಯಿ ಮೂಟೆ-200 ಹೀಗೆ ಒಂದಕ್ಕಿಂತ ಒಂದು ತರಕಾರಿಯ ಬೆಲೆಗಳು ಒಂದೆ ವಾರದಲ್ಲಿ ಕುಸಿತ ಕಂಡಿದೆ.
ಕಳೆದ 6 ತಿಂಗಳಿನಿಂದ ಮಳೆಯಿಲ್ಲದೆ ರೈತರು ತರಕಾರಿಗಳನ್ನ ಬೆಳೆಯೋದೆ ನಿಲ್ಲಿಸಿದ್ದರು. ಆದ್ರೆ, ಇತ್ತೀಚೆಗೆ ಮಳೆಯಾಗುತ್ತಿರುವ ಹಿನ್ನೆಲೆ ಕೋಲಾರದ ರೈತರು ಹೆಚ್ಚಾಗಿ ಹಣ್ಣು ತರಕಾರಿಗಳನ್ನ ಬೆಳೆಯಲು ಆರಂಭಿಸಿದ್ದಾರೆ. ಅದರಂತೆ ಬೇರೆ ಬೇರೆ ಹಣ್ಣು ತರಕಾರಿಗಳನ್ನ ಹೆಚ್ಚಾಗಿ ಬೆಳೆದು ಮಾರುಕಟ್ಟೆಗೆ ಹಾಕುತ್ತಿದ್ದಾರೆ. ತರಕಾರಿ ಉತ್ಪಾದನೆ ಹೆಚ್ಚಾಗಿದ್ದು, ಈಗ ಸರಿಯಾದ ಬೆಲೆ ರೈತರಿಗೆ ಸಿಗುತ್ತಿಲ್ಲ.