Facebook Twitter Instagram YouTube
    ಕನ್ನಡ     English     తెలుగు
    Sunday, January 29
    Facebook Twitter Instagram YouTube
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ     English     తెలుగు
    Facebook Twitter Instagram YouTube
    Home » ರೈತರ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗ್ತಿಲ್ಲ: ತಹಶೀಲ್ದಾರ್ಗೆ ಗ್ರಾಮಸ್ಥರಿಂದ ಮನವಿ

    ರೈತರ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗ್ತಿಲ್ಲ: ತಹಶೀಲ್ದಾರ್ಗೆ ಗ್ರಾಮಸ್ಥರಿಂದ ಮನವಿ

    AIN AdminBy AIN AdminNovember 24, 2022
    Share
    Facebook Twitter LinkedIn Pinterest Email

    ಹುಬ್ಬಳ್ಳಿ: ಭಾರತದ ಬೆನ್ನೆಲುಬು ಆಗಿರುವ ರೈತರು ಹೆಣ್ಣು ಸಿಗದೆ ಪರದಾಡುತ್ತಿದ್ದಾರೆ. ರೈತ ಎಂಬ ಕಾರಣಕ್ಕೆ ಹೆಣ್ಣು ಹೆತ್ತವರು ಮಗಳನ್ನು ಅವರಿಗೆ ಮದುವೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಈ ತೊಂದರೆ ದಿನೇ ದಿನೇ ಹೆಚ್ಚಾಗಲಾರಂಭಿಸಿದ್ದು, ಕೃಷಿಕ ವರ್ಗವನ್ನು ಕಂಗಾಲಾಗುವಂತೆ ಮಾಡಿದೆ.

    ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿರೋ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಈ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಮೂಡಿಸಬೇಕೆಂದು ಕುಂದಗೋಳ ತಹಶೀಲ್ದಾರ್​​ಗೆ ಹೊಸಳ್ಳಿ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದ್ದಾರೆ.

    Demo

    ಕುಂದಗೋಳ ತಾಲೂಕಿನ ಹೊಸಳ್ಳಿ ಗ್ರಾಮಸ್ಥರಿಂದ ವಿಭಿನ್ನ ಮನವಿ ಸಲ್ಲಿಕೆಯಾಗಿದ್ದು, ಚರ್ಚೆಗೆ ಕಾರಣವಾಗಿದೆ. ತಹಶೀಲ್ದಾರ್ ಗ್ರಾಮ ವಾಸ್ತವ್ಯ ವೇಳೆ ಗ್ರಾಮಸ್ಥರು ವಿಭಿನ್ನ ಮನವಿ ಸಲ್ಲಿಸಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡೋಕೆ ಜನರು ಹಿಂದೇಟು ಹಾಕ್ತಿದಾರೆ. ನೌಕರಿ ಇದ್ದರೆ ಮಾತ್ರ ಹೆಣ್ಣು ಕೊಡ್ತೀವಿ ಅಂತಾರೆ. ಹೀಗಾಗಿ ಸರ್ಕಾರ ಜನಜಾಗೃತಿ ಮಾಡಬೇಕೆಂದು ಹೊಸಳ್ಳಿ ಗ್ರಾಮಸ್ಥರು ಕುಂದಗೋಳ ತಹಶೀಲ್ದಾರ್​​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

    ರೈತ ದೇಶದ ಬೆನ್ನೆಲಬು ಅಂತಾರೆ, ಅನ್ನ ನೀಡಲು ರೈತ ಬೇಕು. ಹೀಗಾಗಿ ನಾವು ಕೃಷಿ ಅವಲಂಬಿಸಿದ್ದೇವೆ. ಆದ್ರೆ ನಮ್ಮ ಮಕ್ಕಳಿಗೆ ಎಲ್ಲಿಯೂ ಹೆಣ್ಣು ಸಿಗ್ತಿಲ್ಲ. ಸರ್ಕಾರ ರೈತರ ಕುರಿತು ಮನವರಿಕೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನು ರಾಜ್ಯ ಸರ್ಕಾರದ ಗಮನಕ್ಕೆ ತರೋದಾಗಿ ಕುಂದಗೋಳ ತಹಶೀಲ್ದಾರರು ಭರವಸೆ ನೀಡಿದ್ದಾರೆ.

    Share. Facebook Twitter LinkedIn Email WhatsApp

    Related Posts

    ಲಾಸ್ ಏಂಜಲಿಸ್ ನಗರದ ಹೊರವಲಯದಲ್ಲಿ ಗುಂಡಿನ ದಾಳಿ, ಮೂವರ ನಿಧನ

    January 29, 2023

    ಇರಾನ್ ನಲ್ಲಿ ಪ್ರಬಲ ಭೂಕಂಪ, 7 ಮಂದಿ ನಿಧನ

    January 29, 2023

    ಜೆರುಸಲೆಂನ ಪ್ರಾರ್ಥನಾ ಮಂದಿರದ ಮೇಲೆ ಉಗ್ರ ದಾಳಿ; 7ಕ್ಕೂ ಅಧಿಕ ಮಂದಿ ಸಾವು,

    January 28, 2023

    45ರ ಸಿಇಒ 18ರ ಚಿರಯುವಕನಂತೆ ಕಾಣಲು ವರ್ಷಕ್ಕೆ ಎಷ್ಟು ಡಾಲರ್ ಖರ್ಚು ಮಾಡುತ್ತಾರೆ ಗೊತ್ತಾ..?

    January 28, 2023

    ರೈಲ್ವೆ ಹಳಿಗಳ ಮೇಲೆ ತರಕಾರಿ ಮಾರ್ಕೆಟ್..! ರೈಲು ಹೋದರೂ ತರಕಾರಿ ಮಾತ್ರ ಫ್ರೆಶ್

    January 28, 2023

    ಸಿರಿಧಾನ್ಯ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ಬಿ.ಸಿ.ಪಾಟೀಲ್

    January 27, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.