ಬೆಂಗಳೂರು: ಸರಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ರೈತರು ಈ ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಾರೆ. ಸರಕಾರ ರೈತರಿಗಾಗಿ ಪಿಂಚಣಿ ಯೋಜನೆ ಜಾರಿಗೊಳಿಸುತ್ತಿದೆ. ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾಂಧನ್ ಯೋಜನೆ. ಈ ಯೋಜನೆಯಡಿ ರೈತರು ಕೇವಲ 55 ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ಅವರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ 3000 ರೂಪಾಯಿ ಸಿಗಲಿದೆ.
60 ವರ್ಷ ವಯಸ್ಸಿನ ನಂತರ, ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ ಈ ಹೊಸ ಯೋಜನೆಯಡಿ ಅವರು ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯುವ ಪ್ರಕ್ರಿಯೆ ಹೇಗೆ ಎಂದು ಇಲ್ಲಿ ತಿಳಿಯೋಣ.
500 Note Update: ನಿಮ್ಮ ಬಳಿ 500 ರೂಪಾಯಿ ನೋಟು ಇದ್ಯಾ..? ಕ್ಷಣಮಾತ್ರದಲ್ಲಿ ನೀವು ಆಗ್ಬೋದು ಮಿಲಿಯನೇರ್
ಪ್ರತಿ ತಿಂಗಳು 55 ರೂಪಾಯಿ ಪ್ರೀಮಿಯಂ ಕಟ್ಟಬೇಕು
ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್ ಯೋಜನೆಯನ್ನು ಪ್ರಾರಂಭಿಸಿದ್ದು, ಸಣ್ಣ ರೈತರಿಗೆ ಈ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಯೋಜನೆಯ ಲಾಭ ಪಡೆಯಬಹುದು. ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ.
ಇದು 55 ರಿಂದ 200 ರೂಪಾಯಿ ವರೆಗೆ ಇದೆ. 60 ವರ್ಷ ತುಂಬಿದ ನಂತರ ಯೋಜನೆಗೆ ಸೇರ್ಪಡೆಯಾದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣಹೊಂದಿದರೆ ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು 1500 ರೂಪಾಯಿ ಸಿಗಲಿದೆ
ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ಮೊದಲನೆಯದಾಗಿ ರೈತರು ಈ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಇದಾದ ನಂತರ ರೈತರು ಲಾಗಿನ್ ಆಗಬೇಕು. ಇದರ ನಂತರ, ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ. ನಂತರ Generate OTP ಮೇಲೆ ಕ್ಲಿಕ್ ಮಾಡಿದ ನಂತರ OTP ಬಂದಾಗ ಅದನ್ನು ನಮೂದಿಸಬೇಕಾಗುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.