ಕಂಪ್ಲಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಬೆಂಗಳೂರಿನಲ್ಲಿ ಫೆಬ್ರವರಿ 27ರಂದು ನಡೆಯಲಿದೆ. ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಿವಿಧ ಸಚಿವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಎಂದು ಕಂಪ್ಲಿ ನಗರ ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕು ಅಧ್ಯಕ್ಷ ನಾಗನಗೌಡ ಅವರ ಮಾಹಿತಿ ತಿಳಿಸಿದರು ನಂತರ ಮಾತನಾಡಿದರು
ನೌಕರರ ಪ್ರಮುಖ ಬೇಡಿಕೆಗಳನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗುವುದು. 7ನೇ ವೇತನ ಆಯೋಗದಿಂದ ವರದಿ ಪಡೆದು, ಶಿಫಾರಸುಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ನೌಕರರ ವೇತನದಿಂದ ಕಡಿತ ಮಾಡುತ್ತಿರುವ ಶೇ 10ರಷ್ಟು ವಂತಿಗೆಯನ್ನು ನಿಲ್ಲಿಸಲು ಆದೇಶ ಹೊರಡಿಸಬೇಕು. ನೌಕರರು ಹಾಗೂ ಅವರ ಅವಲಂಬಿತ ಕುಟುಂಬಗಳ ಸದಸ್ಯರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ‘ಕರ್ನಾಟಕ ಆರೋಗ್ಯ ಸಂಜೀವಿನ ಯೋಜನೆ’ ಅನುಷ್ಠಾನ ಮಾಡಬೇಕು. ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಲಾಗುತ್ತದೆ ಎಂದು ವಿವರ ನೀಡಿದರು.
ಈ ಸಂದರ್ಭದಲ್ಲಿ ಕಂಪ್ಲಿ ತಾಲೂಕು ಮಟ್ಟದ ಕರ್ನಾಟಕ ರಾಜ್ಯ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು ಕರು ಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು