ಬೆಂಗಳೂರು:- ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಬಿಎಂಟಿಸಿ ಚಾಲಕ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮದ್ಯಾಹ್ನ ನಡೆದಿದೆ.ಹೊಸಕೋಟೆ ಟೋಲ್ ಬಳಿ ಘಟನೆ ನಡೆದಿದ್ದು, ಅಧಿಕಾರಿಗಳು ವಿಷ ಸೇವಿಸಲು ಯತ್ನಿಸಿದ ನಂಜುಂಡಯ್ಯನನ್ನು ಸಮಾಧಾನ ಪಡಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೋಲಿಸರು ಚಾಲಕನಿಗೆ ಪ್ರಥಮ ಚಿಕಿತ್ಸೆ ಕೊಟ್ಟು, ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಬಿಎಂಟಿಸಿ ಹಿರಿಯ ಅಧಿಕಾರಿಗಳೊಂದಿಗೆ ಪೊಲೀಸರು ಸಮಾಲೋಚನೆ ನಡೆಸಿದರು..
ಮುಂದೆ ಈ ರೀತಿಯ ಕಿರುಕುಳ ಘಟನೆ ಮರುಕಳಿಸದಿರಲಿ ಎಂಬ ಎಚ್ಚರಿಕೆಯನ್ನು ಹಿರಿಯ ಅಧಿಕಾರಿಗಳಿಗೆ ಮತ್ತು ಚಾಲಕನಿಗೆ ಕೊಟ್ಟಿದ್ದಾರೆ. ಚಾಲಕ ಚೆರಿಸಿಕೊಂಡ ನಂತರ ಪೊಲೀಸರು ಸ್ಟೇಟ್ಮೆಂಟ್ ಪಡೆದುಕೊಂಡು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಹೊಸಕೋಟೆಯ ಬಿಎಂಟಿಸಿ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇನ್ಮುಂದೆ ಕಿರುಕುಳ ನೀಡದಿರಲಿ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ..