ಅಥಣಿ:- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಮಾರಾಮಾರಿಯಲ್ಲಿ 3 ವರ್ಷದ ಕಂದಮ್ಮನನ್ನು ಪಾಪಿಗಳು ಕೊಂದ ಘಟನೆ ಜರುಗಿದೆ.
Gadaga: ಬೊಮ್ಮಾಯಿ ಪರ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಮತಬೇಟೆ!
ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿದ್ದ ವೇಳೆ 3 ವರ್ಷದ ಮಗುವಿನ ಎದೆಯ ಮೇಲೆ ಕಾಲಿಟ್ಟಿದ್ದಾರೆ. ಈ ವೇಳೆ ಮಗು ಮೃತಪಟ್ಟಿದೆ ಅಂತ ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಹಣಕಾಸಿನ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ.
ಈ ಎರಡು ಕುಟುಂಬಗಳ ನಡುವಿನ ಜಗಳದಲ್ಲಿ 3 ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಲ್ಲಲಾಗಿದೆ. 3 ವರ್ಷದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಬಾಲಕಿ ಎದೆ ಮೇಲೆ ಪಾಪಿಗಳು ಕಾಲಿಟ್ಟಿದ್ದಾರೆ. ಈ ವೇಳೆ ಬಾಲಕಿ ಮೃತಪಟ್ಟಿದ್ದಾಳೆ.
ಜೋತಿಭಾ ತುಕಾರಾಮ ಬಾಬಾಬರ ಎಂಬುವನ ಮೇಲೆ ಬಾಲಕಿ ಕೊಂದ ಆರೋಪ ಕೇಳಿ ಬಂದಿದೆ. ಎರಡು ಕುಟುಂಬಗಳ ನಡುವಿನ ಜಗಳ ತಾರಕಕ್ಕೇರಿ, ಜೋತಿಭಾ ತುಕಾರಾಮ ಬಾಬಾಬರ ಎಂಬಾತ ಬಾಲಕಿ ಶ್ರೀನಿಧಿ ಎದೆ ಮೇಲೆ ಮೇಲೆ ಕಾಲಿಟ್ಟಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾಲಕಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ