ಬೆಂಗಳೂರು: ಲೋಕಸಭಾ ಚುನಾವಣಾಗೆ ಭರ್ಜರಿಯ ತಯಾರಿ ನಡೆಯುತ್ತಿದೆ.. ಈಗಾಗ್ಲೇ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕೂಡ ಘೋಷಿಸಲಾಗಿದೆ.. ಆದ್ರೆ ಆ ಎರಡು ಕ್ಷೇತ್ರದ ಟಿಕೆಟ್ ವಿಚಾರ ಕಾಂಗ್ರೆಸ್ ವರಿಷ್ಠರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.. ಟಿಕೆಟ್ಗಾಗಿ ನಡೆಯುತ್ತಿರುವ ತಿಕ್ಕಾಟ ಸರಿಪಡಿಸಲು ಸಭೆ ಮೇಲೆ ಸಭೆ ನಡೆಸ್ತಿದ್ದಾರೆ. ಚುನಾವಣೆ ಸಮಯದಲ್ಲಿ ಟಿಕೆಟ್ಗಾಗಿ ಫೈಟ್ ನಡೆಯೋದು ಸಹಜ.. ಆದ್ರೆ ಕೋಲಾರದಲ್ಲಿ ಟಿಕೆಟ್ಗಾಗಿ ನಡೆಯುತ್ತಿರುವ ಫೈಟ್ ಸ್ವಲ್ಪ ಜೋರಾಗಿಯೇ ಇದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ನಡುವಿನ ತಿಕ್ಕಾಟ ಹೊಸದೇನಲ್ಲ.. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೆ.ಹೆಚ್ ಮುನಿಯಪ್ಪ ಅವರನ್ನು ರಮೇಶ್ ಕುಮಾರ್ ಬಣ ಸೋಲಿಸಿತ್ತು.. ಇದು ಎಲ್ಲಾರಿಗೂ ತಿಳಿದಿರುವ ವಿಚಾರವೆ.. ಆದಾದ ಬಳಿಕ ವಿರೋಧದಿಂದ ಬೇಸತ್ತ ಮುನಿಯಪ್ಪ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ರು.. ಇಷ್ಟೆಲ್ಲಾ ನಡೆದ್ರೂ ಕೂಡ ಅವರಿಬ್ಬರ ನಡುವಿನ ಮುನಿಸು ಮಾತ್ರ ಕಡಿಮೆಯೇ ಆಗಿಲ್ಲ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಇದೀಗ ಮತ್ತೆ ಟಿಕೆಟ್ಗಾಗಿ ಟೀವ್ರ ಫೈಪೋಟಿ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಕೆ.ಹೆಚ್.ಮುನಿಯಪ್ಪ ತನ್ನ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಲೇಬೇಕೆಂದು ಬಿಗಿ ಪಟ್ಟು ಹಿಡಿದು ಕುಳಿತಿದ್ದಾರೆ.. ಇತ್ತ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಕುಮಾರ್ ತನ್ನ ಬೆಂಬಲಿಗ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತರಾಯಗೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ.