ಬೆಂಗಳೂರು: ಸಿನಿಮಾ ನಿರ್ಮಾಪಕ (Producer), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಡಿ.ಕೆ. ಶಿವಕುಮಾರ್ ಆಶೀರ್ವಾದ ಪಡೆದ ಡಿ.ಕೆ.ಸುರೇಶ್! Video Viral
ಸದ್ಯ ಜಯದೇವ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟನದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಭಾಮಾ ಹರೀಶ್ ಅವರಿಗೆ ಹೈಬಿಪಿ ಹಾಗೂ ಉಸಿರಾಟದ ತೊಂದರೆ ಉಂಟಾಗಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರ ಕುಟುಂಬ ವರ್ಗದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ವರದಿಗಾಗಿ ಕುಟುಂಬ ವರ್ಗದವರು ಕಾಯುತ್ತಿದ್ದಾರೆ.
ಭಾ.ಮಾ ಹರೀಶ್ ಅನೇಕ ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಅದರಲ್ಲಿ ದರ್ಶನ್ ನಟನೆಯ ಸಿನಿಮಾ ಮೆಜೆಸ್ಟಿಕ್ ಕೂಡ ಒಂದು. ಇದಲ್ಲದೆ, ಅಯ್ಯೋ ಪಾಂಡು, ಪಾಗಲ್ ಸಿನಿಮಾಗಳಿನ್ನು ಪ್ರೊಡ್ಯೂಸ್ ಮಾಡಿದ್ದಾರೆ.