ಕಳೆದ ಹಲವು ದಿನಗಳಿಂದ ರೈತರ ಜಾನುವಾರುಗಳನ್ನು ಕೊಂದು ಉಪಟಳ ನೀಡುತ್ತಿದ್ದ ಭಾರೀ ಗಾತ್ರದ ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮದ್ದೂರು ಗ್ರಾಮದ ಹೊರ ವಲಯದಲ್ಲಿ ಚಿರತೆ ಸೆರೆಯಾಗಿದೆ. ಈ ಚಿರತೆಯು ಕಳೆದ ಹಲವು ದಿನಗಳಿಂದ ರೈತರಿಗೆ ಉಪಟಳ ನೀಡುತ್ತಿತ್ತು ಎನ್ನಲಾಗಿದ್ದು ಚಿರತೆಯು ಹಲವು ರೈತರ ಜಾನುವಾರುಗಳನ್ನು ಕೊಂದು ಆತಂಕ ಸೃಷ್ಟಿಸಿತ್ತು ಎನ್ನಲಾಗಿದೆ.
ಚಿರತೆಯ ಧಾಳಿಯಿಂದ ನಿರಂತರವಾಗಿ ಜಾನುವಾರುಗಳನ್ನು ಕಳೆದುಕೊಂಡ ಆ ಭಾಗದ ರೈತರು ಜಮೀನುಗಳಿಗೆ ತೆರಳಲು ಭಯ ಪಡುವಂತಹ ಸನ್ನಿವೇಶ ನಿರ್ಮಾಣಗೊಂಡಿತ್ತು. ಅಲ್ಲದೆ ಚಿರತೆ ಸೆರೆ ಹಿಡಿಯುವಂತೆ ರೈತರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ರು.
UIIC Jobs: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯಲ್ಲಿ ಭರ್ಜರಿ ಉದ್ಯೋಗಾವಕಾಶ! ಬೇಗ ಅರ್ಜಿ ಹಾಕಿ
ಹಾಗಾಗಿ ಮದ್ದೂರು ಗ್ರಾಮದ ಹೊರ ವಲಯದಲ್ಲಿ ಅರಣ್ಯ ಇಲಾಖೆ ಬೋನು ಇರಿಸಿದ್ರು. ಬೋನಿನ ಬಳಿ ಸುಳಿದಿದ್ರೂ ಚಾಲಾಕಿ ಚಿರತೆ ಬೋನಿಗೆ ಬೀಳದೆ ಜಾನುವಾರುಗಳ ಬೇಟೆಯಲ್ಲಿ ನಿರತವಾಗಿತ್ತು. ನಿನ್ನೆ ತಡ ರಾತ್ರಿ ಚಿರತೆಯು ಬೋನಿಗೆ ಬಿದ್ದ ಕಾರಣ ರೈತರ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಇಲಾಖೆ ಸಿಬ್ಬಂಧಿಗಳು ಕಾಡಿಗೆ ಬಿಟ್ಟಿದ್ದಾರೆ