ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಆರ್.ಸಿ.ಬಿ ದೆಹಲಿ ಪಂದ್ಯ ವೀಕ್ಷಣೆ ವೇಳೆ ಕಳಪೆ ಆಹಾರ ನೀಡಿದ ಆರೋಪದಡಿ FIR ದಾಖಲಾಗಿದೆ.
Breaking: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಜೋಡಿ ಸೂಸೈಡ್..!? ಕಾರಣ ಇಲ್ಲಿದೆ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ಆರ್ ಸಿಬಿ ಹಾಗೂ ಡೆಲ್ಲಿ ವಿರುದ್ಧದ ಪಂದ್ಯ ಏರ್ಪಟ್ಟಿತ್ತು. ಪಂದ್ಯ ವೀಕ್ಷಿಸಲು ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಚೈತನ್ಯ ಎಂಬುವವರು ಕ್ರೀಡಾಂಗಣದ ಕ್ಯಾಂಟೀನ್ ನಲ್ಲಿ ನೀಡಲಾಗಿದ್ದ ಆಹಾರವನ್ನು ಸೇವಿಸಿದ್ದಾರೆ. ಕೆಲ ಸಮಯದ ಬಳಿಕ ಅತೀವ ಹೊಟ್ಟೆನೋವು ಉಂಟಾಗಿದೆ. ತಕ್ಷಣವೇ ಸ್ಟೇಡಿಯಂ ಸಿಬ್ಬಂದಿಯ ನೆರವಿನಿಂದ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಫುಡ್ ಪಾಯಿಸನ್ ಎಂದು ದೃಢ ಪಟ್ಟಿದೆ. ಸದ್ಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)