ಬೆಳಗಾವಿ:- ತಾಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಕಾರ್ಖಾನೆಯ ಲಿಫ್ಟ್ನಲ್ಲಿ ನಿನ್ನೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ.
ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಗೆ ವ್ಯಾಪಿಸಿದ್ದು, ಒಳಗೆ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದು, ಕಾರ್ಯಚರಣೆ ನಡೆಸಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ:ಬಸವರಾಜ ಬೊಮ್ಮಾಯಿ
ಇನ್ಸುಲೆನ್ ಟೇಪ್ ರೆಡಿ ಮಾಡುವ ಕಾರ್ಖಾನೆ ಇದಾಗಿದ್ದು, ನಿನ್ನೆ ಎರಡನೇ ಶಿಫ್ಟ್ ಬಿಡುವ ವೇಳೆ ಏಕಾಏಕಿ ಲಿಫ್ಟ್ನಲ್ಲಿ ಸಣ್ಣ ಪ್ರಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಧಗ ಧಗಿಸಿ ಇಡೀ ಫ್ಯಾಕ್ಟರಿಗೆ ಆವರಿಸಿಕೊಂಡಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಆಗಮಿಸಿದ್ದಾರೆ. ಇನ್ನು ಫ್ಯಾಕ್ಟರಿಯೊಳಗೆ ಕಾರ್ಮಿಕರು ಸಿಲುಕಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಐದು ಆ್ಯಂಬುಲೆನ್ಸ್ ಗಳು ಮೊಕ್ಕಂ ಹೂಡಿವೆ.
ಇನ್ನು ಕೆಲ ಕಾರ್ಮಿಕರು ಬೆಂಕಿಯನ್ನು ನೋಡಿ ಹೊರಗಡೆ ಓಡೋಡಿ ಬಂದಿದ್ದರೆ, ಓರ್ವ ಕಾರ್ಮಿಕ ಲಿಪ್ಟ್ ನಲ್ಲಿ ಸಿಲುಕಿದ್ದಾನೆ ಎಂದು ತಿಳಿದುಬಂದಿದ್ದು, ಕಾರ್ಯಚರಣೆ ಮುಂದುವರಿದಿದೆ.
##