ಬೆಂಗಳೂರು: ದೀಪಾವಳಿಗೆ ಮೊದಲೇ ದೆಹಲಿ ಗ್ಯಾಸ್ ಚೇಂಬರ್ ಆಗಿ ಬದಲಾಗಿದೆ. ದೆಹಲಿಯ ಗಾಳಿ ಗುಣಮಟ್ಟ ಕುಸಿದಿದೆ. ಇದ್ರಿಂದ ಎಚ್ಚೆತ್ತ ಕರ್ನಾಟಕ ಸರ್ಕಾರ, ಸುಪ್ರೀಂ ಕೋರ್ಟ್ ಆದೇಶದ ಅನುಸಾರ ರಾತ್ರಿ 8 ರಿಂದ 10 ಗಂಟೆ ತನಕ ಹಸಿರು ಪಟಾಕಿ ಹೊಡೆಯಬೇಕು ಎಂದು ಎಚ್ಚರಿಕೆ ನೀಡಿದೆ.
ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ರಾತ್ರಿ 8 ಗಂಟೆಯಿಂದ 10 ಗಂಟೆ ತನಕ ಪಟಾಕಿ ಹೊಡೆಯಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದೆ ಎಂದಿದ್ದಾರೆ.
ನೀವು ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇಲ್ಲಿದೆ ನೋಡಿ ಬಂಪರ್ ಯೋಜನೆ! ಕಡಿಮೆ ಸಮಯ, ಹೆಚ್ಚು ಲಾಭ!
ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಪಟಾಕಿಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು ಎಂದು ಸೂಚನೆ ನೀಡಿದ್ದಾರೆ.