ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ತನ್ನ ಸಿಡ್ಲೂಸಿ ಸಭೆ ನಡೆಸಿದೆ. ಸಭೆಯಲ್ಲಿ ಸೋಲಿನ ಪರಾಮರ್ಶೆ ಮತ್ತು ರಾಹುಲ್ ಗಾಂಧಿ ಅವರು ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುವ ಬಗ್ಗೆ ಮತ್ತು ಮುಂದಿನ ದಿನಗಳಲ್ಲಿ ಪಕ್ಷ ಬಲವರ್ದನೆ ಕುರಿತು ಚರ್ಚೆ ನಡೆಸಿದ್ದಾರೆ. ದೆಹಲಿಯ ಅಶೋಕ ಹೋಟೆಲ್ ನಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸಿಡ್ಲೂಸಿ ಸಭೆ ನಡೆಸಿದೆ.
ಸಭೆಯಲ್ಲಿ ಪ್ರಮುಖವಾಗಿ ಲೋಕ ಸಭೆ ವಿಪಕ್ಷ ನಾಯಕ, ಫಲಿತಾಂಶ ಪರಾಮರ್ಶೆ, ಪಕ್ಷ ಬಲವರ್ಧನೆ ಮತ್ತು ರಾಹುಲ್ ಗಾಂಧಿ ಕ್ಷೇತ್ರ ಉಳಿಸಿಕೊಳ್ಳುವ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ರಾಹುಲ್ ಗಾಂಧಿ, ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೇವಾಲ, ಎ.ಕೆ. ಆ್ಯಂಟನಿ, ಗೌರವ್ ಗೊಗಯ್, ಮನೀಶ್ ತಿವಾರಿ, ಅಂಬಿಕಾ ಸೋನಿ, ಸಲ್ಮಾನ್ ಖುರ್ಷಿದ್, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವರು ಭಾಗಿಯಾಗುದ್ರು.
![Demo](https://ainlivenews.com/wp-content/uploads/2023/12/spoorthi-1.jpg)
Google Search: ಒಂಟಿಯಾಗಿರುವಾಗ Googleನಲ್ಲಿ ಯುವತಿಯರು ಅತಿ ಹೆಚ್ಚು ಹುಡುಕಾಟ ನಡೆಸುವುದೇನು ಗೊತ್ತಾ..?
ಸಭೆಯಲ್ಲಿ ಭಾರತ್ ಜೋಡೋ ಯಾತ್ರೆಯ ಪ್ರಭಾವವನ್ನು ಪ್ರಸ್ತಾಪಿಸಿರುವ ಖರ್ಗೆ, ಯಾತ್ರೆಗೆ ಅಂಗೀಕಾರ ಸಿಕ್ಕ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷ ಗಮನಾರ್ಹ ಸಾಧನೆ ಕಂಡಿದೆ. ಮಣಿಪುರವನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಖರ್ಗೆ, ಅಲ್ಲಿ ಪಕ್ಷವು ಎರಡೂ ಸ್ಥಾನಗಳನ್ನು ಗೆದ್ದಿದೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಂತಹ ಇತರ ಈಶಾನ್ಯ ರಾಜ್ಯಗಳಲ್ಲಿಯೂ ಗೆದ್ದಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಅಂತಾ ಎಐಸಿಸಿ ಅಧ್ಯಕ್ಷ ಖರ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಂತಾ ವೇಣುಗೋಪಾಲ್ ತಿಳಿಸಿದ್ರು.
ಅದೇ ರೀತಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದಾಗ್ಯೂ, ನಗರ ಮತದಾರರಲ್ಲಿ ಪಕ್ಷದ ಪ್ರಭಾವವನ್ನು ಬಲಪಡಿಸಲು ಪಕ್ಷದಿಂದ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ. ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದರೂ, ಲೋಕಸಭೆಯಲ್ಲಿ ಆ ಯಶಸ್ಸನ್ನು ಪುನರಾವರ್ತಿಸಲು ವಿಫಲವಾಗಿದೆ ಅಂತಾ ಸಿಡ್ಲೂಸಿ ಸಭೆಯಲ್ಲಿ ಅಸಮಾಧಾನ ಹೊರ ಹಾಕಲಾಗಿದೆ, ಇದರಲ್ಲಿ ಕರ್ನಾಟಕ ಮತ್ತು ತೆಲಂಗಾಣ ರಾಜ್ಯದ ನಾಯಕರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಹಾಗಾಗಿ, ಅತೀ ಶೀಘ್ರದಲ್ಲೇ ಈ ಎಲ್ಲಾ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸಬೇಕಿದೆ. ಪಕ್ಷವು ತಕ್ಷಣವೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಚರ್ಚಿಸಲಾಗಿದೆ. ಇದರ ಜೊತೆಗೆ, ಇಂಡಿಯಾ ಬಣದ ಪಾಲುದಾರರ ಕೊಡುಗೆಗಳನ್ನು ಶ್ಲಾಘಿಸಿರುವ ಖರ್ಗೆ, ಸಂಸತ್ತಿನ ಒಳಗೆ ಮತ್ತು ಹೊರಗೆ ಏಕತೆ ಮತ್ತು ಸಾಮೂಹಿಕ ಕ್ರಿಯೆಯನ್ನು ಕಾಪಾಡಿಕೊಳ್ಳುವ ಪ್ರಾಮುಖ್ಯತೆಯನ್ನು ಒತ್ತಿ ಒತ್ತಿ ಹೇಳಿದ್ದಾರೆ.
ಇನ್ನೂ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳಿಂದ ಗೆದ್ದಿರುವ ರಾಹುಲ್ ಗಾಂಧಿ ಒಂದು ಕ್ಷೇತ್ರ ಮಾತ್ರ ಉಳಿಸಿಕೊಳ್ಳಬೇಕಾಗಿದೆ. ಹಾಗಾಗಿ, ಇಂದಿನ ಸಭೆಯಲ್ಲಿ ವಯನಾಡ್ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಅಂತಾ ಹೇಳಲಾಗ್ತಿದೆ. ಮುಂದಿನ ಹತ್ತು ದಿನಗಳ ಒಳಗೆ ವಯನಾಡ್ ಗೆ ರಾಹುಲ್ ಗಾಂಧಿ ರಾಜೀನಾಮೆ ಕೊಟ್ಟು, ರಾಯ್ ಬರೇಲಿಯಲ್ಲಿ ಸಂಸದನಾಗಿ ಮುಂದುವರಿಯಲಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)