ಬೀದರ್ : ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಬೀದರ ನಗರದ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಡಿಕ್ಕಿಯಾಗಿ ೫ ಜನರು ಮೃತಪಟ್ಟು, ಇತರ ಏಳು ಜನರು ಗಾಯಗೊಂಡಿದ್ದಾರೆ. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥೀವ ಶರೀರವನ್ನು ಬೀದರ್ ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಮಾಹಿತಿ ನೀಡಿದರು. ಈ ಸಂಕಷ್ಟದ ಸಮಯದಲ್ಲಿ ಕುಟುಂಬಸ್ಥರ ರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.