ಬಾಗಲಕೋಟೆ: ಜನಪದ ಕಲಾವಿದ, ಚಿತ್ರನಟ ಗುರುರಾಜ ಹೊಸಕೋಟೆ (Gururaj Hosakote) ಅವರ ಕಾರು ಅಪಘಾತಕ್ಕೀಡಾದ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಮುಧೋಳ (Mudhol) ತಾಲೂಕಿನ ಸೋರಗಾವಿ ಬಳಿ ನಡೆದಿದೆ.
ನವರಾತ್ರಿ 5ನೇ ದಿನದ ದೇವಿ ಸ್ಕಂದಮಾತಾ: ದಿನಾಂಕ, ಪೂಜಾ ವಿಧಿ, ಶುಭ ಮುಹೂರ್ತ! ಇಲ್ಲಿದೆ ಡೀಟೈಲ್ಸ್!
ಎದುರು ಬಂದ ವಾಹನ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಇನ್ನು ಕಾರಿನಲ್ಲಿದ್ದ ಗುರುರಾಜ ಹೊಸಕೋಟೆ ಅವರು ಪ್ರಾಣಾಪಾದಿಂದ ಪಾರಾಗಿದ್ದು, ಯಾರಿಗೂ ಯಾವುದೇ ಗಾಯ ಹಾಗೂ ಪ್ರಾಣಹಾನಿ ಉಂಟಾಗಿಲ್ಲ. ಸಿಂಧನೂರಿನಿಂದ ಮಹಾಲಿಂಗಪುರಕ್ಕೆ ಹೊರಟಿದ್ದ ಸಂದರ್ಭ ಅಪಘಾತ ಸಂಭವಿಸಿದೆ.