ಬೆಂಗಳೂರು: ಬರಗಾಲದಿಂದ ಬೀಜೋತ್ಪಾದನೆ ಕುಂಠಿತವಾದ ಕಾರಣ ದರ ಹೆಚ್ಚಳವಾಗಿದೆ. ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023 ಕ್ಕೆ ಹೋಲಿಸಿದರೆ ಈ ಬಾರಿ ಗರಿಷ್ಠ ಶೇ.48.50 ರಷ್ಟಿದೆ. ದರ ಹೆಚ್ಚಳದಿಂದಾಗಿ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
ಆದಾಗ್ಯೂ ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆಯಿದೆ ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಸಚಿವರು, ಇದು ನಮ್ಮ ವ್ಯಾಪ್ತಿಗೆ ಬರಲ್ಲ. ಆಹಾರ ಧಾನ್ಯಗಳ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.
Pension Rules: ಗಂಡನ ಸಾವಿನ ನಂತರ ಪತ್ನಿಗೆ ಪಿಂಚಣಿಯ ಹಕ್ಕು ಇದೆಯೇ? EPFO ನಿಯಮದಲ್ಲಿ ಏನಿದೆ..?
ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಕಾರ್ಯ ಮಾಡಲು ಸಜ್ಜಾಗುತ್ತಿದ್ದಾರೆ. ಆದರೆ ಸರ್ಕಾರ ರಾಜ್ಯದ ರೈತರಿಗೆ ಶಾಕ್ ನೀಡಿದೆ. ಬಿತ್ತನೆ ಬೀಜಗಳ ದರಗಳನ್ನು ಜಾಸ್ತಿ ಮಾಡಲಾಗಿದೆ. ಹೆಸರು 805 ರೂ, ಉದ್ದು 660, ತೊಗರಿ 776, ಸೋಯಾಬಿನ್ 1,431 ರೂ. ಇದ್ದು, ಕಳೆದ ಬಾರಿಗಿಂತ ಈ ಬಾರಿ 20-30 ಪರ್ಸೆಂಟ್ ದರ ಹೆಚ್ಚಳ ಮಾಡಲಾಗಿದೆ. ಸರ್ಕಾರದ ವಿರುದ್ಧ ಧಾರವಾಡ ಜಿಲ್ಲಾ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಪ್ರಮುಖವಾಗಿ ಮುಂಗಾರು ಸಮಯದಲ್ಲಿ ಹೆಸರು, ಉದ್ದು, ಶೇಂಗಾ, ತೊಗರಿ ಹಾಗೂ ಸೋಯಾಬಿನ್ ಬೆಳೆಯನ್ನ ಬಿತ್ತುತ್ತಾರೆ. ಈ ಬಾರಿ ಸೋಯಾ ಒಂದನ್ನು ಬಿಟ್ಟರೆ ಉಳಿದ ಬೆಳೆಯ ಬೀಜದ ಎಲ್ಲ ದರ ಹೆಚ್ಚಳವಾಗಿವೆ. ಸದ್ಯ ಧಾರವಾಡ ಜಿಲ್ಲೆಯಲ್ಲಿ 25 ಕಿಲೋಗೆ ಕಳೆದ ಬಾರಿಯ ದರಕ್ಕಿಂತ ಹೆಚ್ಚಿನ ದರ ಮಾಡಲಾಗಿದೆ. ಕಳೆದ ವರ್ಷ ಬರಗಾಲದಿಂದ ತತ್ತರಿಸಿದ್ದ ರೈತರಿಗೆ ಈ ಬೆಲೆ ಹೆಚ್ಚಳವಾಗಿದ್ದು, ರೈತರ ಬೆನ್ನೆಲುಬು ಎನ್ನುವ ಸರ್ಕಾರ ಯಾಕೆ ಇಷ್ಟು ಬೆಲೆ ಹೆಚ್ಚಳ ಮಾಡಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.