ಬೆಂಗಳೂರು : ಅವರು ಪಿಜಿ ಊಟವನ್ನೇ ಮೃಷ್ಟಾನ್ನ ಭೋಜನ ಅಂತಾ ಸೇವಿಸುತ್ತಿದ್ದವರು. ಆದರೆ ನಿನ್ನೆ ಅವರೆಲ್ಲರ ಗ್ರಹಚಾರ ಕೆಟ್ಟಿತ್ತು. ಊಟ ಮಾಡಿದ ತಕ್ಷಣ ಆಸ್ಪತ್ರೆ ಸೇರುವಂತಾಗಿತ್ತು. ಹಾಗಾದ್ರೆ ಅಲ್ಲಿ ಆಗಿದ್ದೇನೂ, ಅಸ್ವಸ್ಥರಾದವರ ಸ್ಥಿತಿ ಹೇಗಿದೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
ಸಿಗ್ನಲಿಂಗ್ ಕಾರ್ಯ: ನಾಳೆಯಿಂದ ಸೆ.11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್!
ಯೆಸ್… ಇತ್ತಿಚೆಗೆ ಖಾಸಗಿ ಖಾಸಗಿ ಹಾಸ್ಟೆಲ್ ಗಳ ಮೇಲೆ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಎಷ್ಟೆ ಕಣ್ಣಿಟ್ಟಿದ್ದರು ಕೂಡಾ ಒಂದಲ್ಲಾ ಒಂದು ಪ್ರಕರಣಗಳು ಬೆಳಕಿಗೆ ಬರ್ತಾನೆ ಇವೆ.. ಅದರಂತೆ ಬೆಂಗಳೂರಲ್ಲಿ ಮತ್ತೊಂದು ಪಿಜಿಯಲ್ಲಿ ರಾತ್ರಿ ಊಟ ಸೇವಿಸಿ ಇಪ್ಪತ್ತು ವಿದ್ಯಾರ್ಥಿಗಳು ಆಸ್ಪತ್ರೆಗೆ ಸೇರಿದ್ದಾರೆ.. ಊಟ ಮಾಡುವಾಗ ಇಲಿ ಪಾಯ್ಸನ್ ಸ್ಪ್ರೇ ಮಾಡಿದ್ದರ ಪರಿಣಾಮ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಡರಾತ್ರಿ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.
ಹೌದು..ಆದರ್ಶ ನರ್ಸಿಂಗ್ ಹಾಸ್ಟೆಲ್ನಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿಗಳು ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡಲು ಬಂದಿದ್ದರು. ಹಾಸ್ಟೆಲ್ನಲ್ಲಿದ್ದ ನೆಲಮಹಡಿಯಲ್ಲಿರುವ ಜನರೇಟರ್ ಗಳಿಗೆ ಇಲಿಗಳಿಂದ ಹಾನಿಯಾಗುತ್ತಿದ್ದುದರಿಂದ ಇದೇ ಸಂಧರ್ಭದಲ್ಲಿಯೇ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಶಾಣ ಸ್ಪ್ರೇ ಮಾಡುತ್ತಿದ್ದರು. ಏನೂ ಆಗಲಾರದು ಎಂದು ಊಟ ಮುಗಿಸಿ ಹೋಗಿದ್ದ 19 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ತಕ್ಷಣವೇ ಎಚ್ಚೆತ್ತ ಹಾಸ್ಟೆಲ್ ಸಿಬ್ಬಂದಿ ಹತ್ತಿರದ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳ ರವಾನೆ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. 19 ವಿದ್ಯಾರ್ಥಿಗಳ ಪೈಕಿ ಜಯಂತ್ ವರ್ಗೀಸ್, ದಿಲಿಶ್ ಮತ್ತು ಜೋಮೊನ್ ಅವರ ಸ್ಥಿತಿ ಚಿಂತಾಜನಕವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರ ವಿದ್ಯಾರ್ಥಿಗಳ ಸ್ಥಿತಿ ಸ್ಥಿರವಾಗಿದೆ.. ಆಸ್ಪತ್ರೆಗೆ ದಾಖಲಾದ ನೋಯಲ್ ಎಂಬ ವಿದ್ಯಾರ್ಥಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಹಾಸ್ಟೆಲ್ ಆಡಳಿತ ಮಂಡಳಿ, ಹಾಸ್ಟೆಲ್ ವಿರುದ್ಧ ವಿಷಕಾರಿ ಪದಾರ್ಥಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಬಿಎನ್ಎಸ್ನ ಸೆಕ್ಷನ್ 286 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇನ್ನು ಹಾಸ್ಟೆಲ್ ನಿರ್ಲಕ್ಷ್ಯವಹಿಸಿದ ಆರೋಪದಡಿ ಹಾಸ್ಟೆಲ್ ವಾರ್ಡನ್ ಮಂಜೇಗೌಡ ಹಾಗೂ ವ್ಯವಸ್ಥಾಪಕ ಸಿಬ್ಬಂದಿ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿರೋ ಪೊಲೀಸರು…