ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ತಿರುವು ದೊರೆತಿದ್ದು, ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ್ ಹಾಸನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜತೆಗಿರುವ ಫೋಟೊ ವೈರಲ್ ಆಗುತ್ತಿದೆ. ಪುಟ್ಟರಾಜ್ ಮನೆಯಲ್ಲಿ ಕಾರ್ತಿಕ್ ಮತ್ತು ಶ್ರೇಯಸ್ ಪಟೇಲ್ ಊಟ ಮಾಡಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗುತ್ತಿದೆ.
ಕಾರ್ತಿಕ್ ಪರಿಚಯವೇ ಇಲ್ಲ, ಆದರೆ ಒಮ್ಮೆ ಮಾತ್ರ ಭೇಟಿಯಾಗಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಈ ಹಿಂದೆ ಹೇಳಿದ್ದರು. ಆದರೆ ಈಗ ಕಾರ್ತಿಕ್, ಶ್ರೇಯಸ್, ಪುಟ್ಟರಾಜು ಜತೆಗೆ ಇರುವ ಫೋಟೋಗಳು ವೈರಲ್ ಆಗಿವೆ. ಡಿಸಿಎಂ ಡಿಕೆ ಶಿವಕುಮಾರ್ಗೆ ಪೆನ್ಡ್ರೈವ್ ತಲುಪಿಸಿದ್ದು ಪುಟ್ಟರಾಜು ಎಂಬ ಆರೋಪವಿದೆ. ಈ ಬಗ್ಗೆ ಬಿಜೆಪಿ ಮುಖಂಡ ದೇವರಾಜೇಗೌಡ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಇದೀಗ ಫೋಟೋವನ್ನು ಜೆಡಿಎಸ್ ಕಾರ್ಯಕರ್ತರು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಪ್ರಜ್ವಲ್ ರೇವಣ್ಣ ಲೈಗಿಂಕ ಕಿರುಕುಳ ಪ್ರಕರಣದಲ್ಲಿ ಸೋರಿಕೆಯಾಗಿರುವ ವಿಡಿಯೋದಲ್ಲಿ ಕಾಣಿಸಿರುವ ಸಂತ್ರಸ್ತೆರನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಈಗಾಗಲೇ 9ಜನ ಸಂತ್ರಸ್ತೆಯರನ್ನು ಪತ್ತೆ ಹಚ್ಚರುವ ಎಸ್ಐಟಿ, ಹೇಳಿಕೆ ದಾಖಲು ಮಾಡಿದೆ.