ಬೆಂಗಳೂರು:- ರಾಜ್ಯಪಾಲರ ಗೈರುಹಾಜರಿಯಲ್ಲಿ ಮೊಟ್ಟ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮ ನಡೆದಿದೆ.
ಘಟಿಕೋತ್ಸವಕ್ಕೆ ರಾಜ್ಯಪಾಲರು ಗೈರಾದ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಮೂಡಾ ಪ್ರಕರಣದ ಚರ್ಚೆ ಮಧ್ಯೆ ಘಟಿಕೋತ್ಸವದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೂರ ಉಳಿದಿದ್ದಾರೆ. ಹೀಗಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು.
ಫೇಕ್ ಪೀಪಲ್ ಎಲ್ಲವನ್ನೂ ಮೇಂಟೈನ್ ಮಾಡುತ್ತಾರೆ: ಚರ್ಚೆ ಹುಟ್ಟು ಹಾಕಿದ ರಚಿತಾ ಪೋಸ್ಟ್!
59ನೇ ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯ್ತು. ಮ್ಯೂಸಿಕ್ ಡೈರೆಕ್ಟರ್ ಗುರು ಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನಿಸಲಾಯ್ತು. ಜೊತೆಗೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತ ಕೆ.ಎಸ್.ರಾಜಣ್ಣ ರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಯ್ರು. ಈ ವೇಳೆ ಮಾತನಾಡಿದ ಸಂಗೀತ ನಿರ್ದೇಶಕ ಗುರು ಕಿರಣ್, ನನ್ನ ತಂದೆತಾಯಿ ನಾನು ಡಾಕ್ಟರ್ ಆಗಬೇಕೆಂಬ ಕನಸ್ಸು ಕಂಡಿದ್ರು. ಆದ್ರೆ ಇವತ್ತು ಮ್ಯೂಸಿಕ್ ನಲ್ಲಿ ನಾನು ಡಾಕ್ಟರ್ ಆದೆ ಎಂದು ಸಂತಸ ವ್ಯಕ್ತಪಡಿಸಿದ್ರು. ಘಟಿಕೋತ್ಸವ ಕಾರ್ಯಕ್ರಮಕ್ಕೆ ಅಶ್ವಿನಿ ಪುನಿತ್ ರಾಜ್ ಕುಮಾರ್, ನಟಿ ಪ್ರಿಯಾಂಕ ಉಪೇಂದ್ರ ಭಾಗವಹಿಸಿದ್ದರು.
ಈ ಬಾರಿ ಒಟ್ಟು 168 ವಿದ್ಯಾರ್ಥಿಗಳು ಚಿನ್ನದ ಪದಕ ಗೆದಿದ್ದಾರೆ. ಪ್ರತಿ ಸಲದಂತೆ ಈ ವರ್ಷವೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಕೆಮಿಸ್ಟ್ರಿ ವಿಭಾಗದ ವಿದ್ಯಾರ್ಥಿನಿ ಅನ್ನಪೂರ್ಣ ಎಂಬುವವರು 9 ಗೋಲ್ಡ್ ಮೆಡಲ್ ಪಡೆದು ಚಿನ್ನದ ನಗೆ ಬೀರಿದ್ರು. 140 ಜನರಿಗೆ ಪಿಹೆಚ್ ಡಿ ಪದವಿ ಪ್ರಧಾನಿಸಲಾಯ್ತು.
ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಕಾರ್ಯಕ್ರಮದಲ್ಲಿ ವಿವಿ ವಿಚಾರ ಬಿಟ್ಟು ಎಸ್ಇಪಿ ನೀತಿ ಜಾರಿ ಮಾಡುವ ವಿಚಾರ ಪ್ರಸ್ತಾಪಿಸಿದ್ರು.