ಮಡಿಕೇರಿ:- ಚನ್ನಂಗೊಲ್ಲಿ ಗ್ರಾಮದಲ್ಲಿ ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ.
ಡಾಲಿ ಧನಂಜಯ್ ಮದುವೆ ಆಮಂತ್ರಣ ಪತ್ರಿಕೆಗೆ ಮನಸೋತು ವಿಶೇಷ ಉಡುಗೊರೆ ನೀಡಿದ ಭಾರತೀಯ ಅಂಚೆ ಇಲಾಖೆ
ಜಾನಕಿ (52) ಮೃತ ಮಹಿಳೆ. ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತೆ ಅಗಿದೆ. ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಸಮಸ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಈ ನಡುವೆ ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ
ಚನ್ನಂಗೊಲ್ಲಿ ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭದಲ್ಲಿ ಮಹಿಳೆ ಮೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ