ಟೀಂ ಇಂಡಿಯಾ ನಾಯಕರಾಗಲು ಶುಭ್ಮನ್ ಗಿಲ್, ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ನಡುವೆ ದೊಡ್ಡ ಹೋರಾಟ ನಡೆಯುತ್ತಿದೆ, ಹೀಗಿರುವಾಗಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಕ್ರಿಕೆಟ್ ವಿಶ್ಲೇಷಕ ಸಂಜಯ್ ಮಂಜ್ರೇಕರ್, 30 ವರ್ಷದ ವೇಗಿ ಜಸ್ಪ್ರೀತ್ ಬುಮ್ರಾ,
ಭಾರತದ ಭವಿಷ್ಯದ ನಾಯಕರಾಗಲು ಸೂಕ್ತವಾದ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರೀತ್ ಬುಮ್ರಾ, ಭಾರತ ಟಿ20, ಏಕದಿನ ಹಾಗೂ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಅವರಲ್ಲಿ ಒಳ್ಳೆಯ ನಾಯಕತ್ವದ ಗುಣಗಳು ಇವೆ ಎಂದು ಮುಂಬೈ ಮೂಲದ ಮಾಜಿ ಕ್ರಿಕೆಟಿಗ ಅಭಿಪ್ರಾಯಪಟ್ಟಿದ್ದಾರೆ.
Masala Peanuts: ಬೇಕರಿಯಲ್ಲಿ ಸಿಗುವ ಮಸಾಲಾ ಶೇಂಗಾ ಮನೆಯಲ್ಲೇ ಮಾಡಿ..! ಇಲ್ಲಿದೆ ರೆಸಿಪಿ
ಸದ್ಯದ ಪರಿಸ್ಥಿತಿಯಲ್ಲಿ ನಿರಂತರವಾಗಿ ಮೂರು ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದು ಅಷ್ಟು ಸುಲಭದ ಮಾತಲ್ಲ. ಈ ಕಾರಣಕ್ಕಾಗಿ ಭವಿಷ್ಯದ ದೃಷ್ಟಿಯಿಂದ ವಿವಿಧ ಮಾದರಿಯ ಕ್ರಿಕೆಟ್ ತಂಡಕ್ಕೆ ಬೇರೆ ಬೇರೆ ನಾಯಕರಾಗುವುದು ಸೂಕ್ತ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.
“ಮೂರು ಮಾದರಿಯ ಭಾರತ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿದ್ದರೂ, ರೋಹಿತ್ ಅಲಭ್ಯರಾಗಿದ್ದಾಗ ಭಾರತ ಟಿ20, ಏಕದಿನ ಹಾಗೂ ಟೆಸ್ಟ್ ತಂಡಕ್ಕೆ ಬೇರೆ ಬೇರೆ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗೆಲ್ಲಾ ಆಗುತ್ತೆ” ಎಂದು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.