ಬೆಂಗಳೂರು:- ಮಾಜಿ ಸಚಿವ ಹೆಚ್ ಡಿ ರೇವಣ್ಣನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಅಕ್ರಮ ಮದ್ಯದ ಅಡ್ಡದ ಮೇಲೆ ಖಾಕಿ ದಾಳಿ.. 890 ಲೀಟರ್ ಎಣ್ಣೆ ಜಪ್ತಿ… !
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ರೇವಣ್ಣ ಆಪ್ತ ಸಹಾಯಕನ ತೋಟದ ಮನೆಯಿಂದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಎಚ್ಡಿ ರೇವಣ್ಣ ಪರ ವಕೀಲರು ಹಾಜರಾಗಿ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ರು. ಈಗ ಜಾಮೀನು ನೀಡಿದ್ರೆ ಇಂದೇ ಸಂಜೆ 5.30ಕ್ಕೆ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರೆ ಅಂತ ಭರವಸೆ ನೀಡಿದ್ರು. ಆದರೆ ಇದಕ್ಕೆ ಎಸ್ಐಟಿ ಎಸ್ಪಿಪಿ ಜಗದೀಶ್ ವಿರೋಧ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿದೆ