ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು, ಸಕಲ ಸಿದ್ಧತೆಗಳೊಂದಿಗೆ ಪೂಜಾ ಕೈಂಕರ್ಯಗಳು ಈಗಾಗಲೇ ಆರಂಭಗೊಂಡಿದೆ.
Video Player
00:00
00:00
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಾಜಿ ಪ್ರಧಾನಿ ಹೆಚ್ಡಿಡಿ ಇಂದು ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಯವರೊಂದಿಗೆ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಕುಟುಂಬ ಸಮೇತರಾಗಿ ಹೆಚ್ಡಿಡಿ ಪ್ರಯಾಣ ಮಾಡಲಿದ್ದು, ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಲಿದ್ದಾರೆ.