ಗದಗ: ಸರ್ಕಾರದ ಅನುದಾನದಲ್ಲಿ ಗುಣಮಟ್ಟದ ಕಾಮಗಾರಿಯ ನೇರವೇರಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಅವರು ಹೇಳಿದರು.
ಬೆಂಗಳೂರು ವಿವಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿ.. ಸರ್ಕಾರಕ್ಕೆ ಬಸವರಾಜ್ ಹೊರಟ್ಟಿ ಮನವಿ!
ನಗರದ ನಗರಸಭೆ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ ಮತ್ತು ನಗರಸಭೆಯ ಸಹಯೋಗದಲ್ಲಿ ರೂ 18.26ಕೋಟಿ ಗಳ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರಗಳಿಗೆ ಮೂಲಭೂತ ಸೌಲಭ್ಯದ ಕೊರತೆ ಸಾಕಸ್ಟಿದೆ, ಈ ಅನುದಾನದಲ್ಲಿ ಕಾಮಗಾರಿ ಪ್ರಾರಂಭ ಗೊಳ್ಳುವ ಮೂಲಕ ಮೂಲಭೂತ ಸೌಲಭ್ಯದ ಕೊರತೆ ಕಡಿಮೆಯಾಗಲಿದೆ ಎಂದರು.
ಕಾಮಗಾರಿಗಳಿಗೆ ಸಾಕಷ್ಟು ಹಣ ಹರಿದು ಬರುತ್ತೆ,ಹಾಗಾಗಿ ಕಾಮಗಾರಿಯ ಅನುಷ್ಟಾನದಲ್ಲಿ ಕೆಲಸದ ಗುಣಮಟ್ಟ ಮಾತ್ರ ಸುದಾರಿಸಬೇಕು ಎಂದು ಅಭಿಪ್ರಾಯ ಪಟ್ಟರು.
ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ಕಾಮಗಾರಿಯ ಪ್ರತಿ ಹಂತದಲ್ಲೂ ಪರಿಶೀಲನೆ ಮಾಡಿ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಾಗ ಮಾತ್ರ ಎಲ್ಲರೂ ಜಾಗೃತಿ ವಹಿಸುತ್ತಾರೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಗಳು ನಿಗಾವಹಿಸಬೇಕು ಎಂದು ಸೂಚಿಸಿದರು.
ನಗರೋತ್ಥಾನ ಅನುದಾನ ಹೆಚ್ಚಿಗೆ ಬರಲು ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ.ಪಾಟೀಲ ಕಾರಣರಾಗಿದ್ದಾರೆ. ಶಂಕುಸ್ಥಾಪನೆ ಮಾಡಿದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ ಎಂದರು.
ಲೋಕಸಭಾ ಸದ್ಯಸರಾದ ಬಸವರಾಜ ಬೊಮ್ಮಾಯಿ ಮಾತನಾಡಿ 5 ವರ್ಷದ ಅಧಿಕಾರವಧಿಯಲ್ಲಿ ಎಲ್ಲಾ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು 59 ತಿಂಗಳು ಅಭಿವೃದ್ಧಿ ಕಡೆಗೆ ಗಮನ ಹರಿಸಿ, ಒಂದು ತಿಂಗಳು ಮಾತ್ರ ರಾಜಕೀಯ ಮಾಡಿದಾಗ ಜನರಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂದರು.
ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಪಕ್ಷಗಳು ಬೇರೆ ಬೇರೆ ಯಾಗುತ್ತವೆ ಆದರೆ ಸರ್ಕಾರದ ಕಾರ್ಯಗಳು ನಿರಂತರ ನಡೆಯುವ ವ್ಯವಸ್ಥೆ. ನಾವು ಒದಗಿಸಿದ ಅನುದಾನದ ಕಾಮಗಾರಿಗಳು ಆಡಳಿತಾತ್ಮಕ ದೋಷಗಳನ್ನು ಸರಿಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಆರಂಭ ಆಗಿ ಮುಕ್ತಾಯ ಆದಾಗ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸಮಾಡಲು ಸಹಾಯಕವಾಗುತ್ತದೆ ಎಂದರು
ಗದಗ ರಾಜ್ಯದಲ್ಲಿ ಪ್ರಮುಖ ನಗರ ಹಾಗೂ ಭವಿಷ್ಯದ ನಗರವಾಗಿದೆ. ಅಭಿವೃದ್ಧಿಯಲ್ಲಿ ಯೋಜನಾಭದ್ದವಾಗಿ ಕಾರ್ಯ ಮಾಡಿದರೇ, ಮಹಾನಗರ ಔದ್ಯೋಗಿಕ ಕೇಂದ್ರವಾಗಿ ಮಾರ್ಪಾಡು ಆಗಲಿದೆ ಎಂದರು.
ಎಲ್ಲಾ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆ ಮೂಲಕ ವಿಕೇಂದ್ರಿಕರಣ ಸಾಧ್ಯ. ಬದಲಾವಣೆಗಳನ್ನು ಜನರು ನಿರೀಕ್ಷೆ ಮಾಡುತ್ತಾರೆ. ಅವರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡೋಣ ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಉಷಾ ದಾಸರ ಮಾತನಾಡಿ ನಗರೋತ್ಥಾನ ಕಾಮಗಾರಿ ಕೈಗೊಳ್ಳಲು ಅನುದಾನ ನೀಡಿದ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ ಅವರಿಗೆ ಧನ್ಯವಾದ ತಿಳಿಸಿದರು. ಈ ಅನುದಾನದಿಂದ ತಾವು ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಸಿ.ಸಿ.ಪಾಟೀಲ್, ಡಾ.ಚಂದ್ರು ಲಮಾಣಿ, ಎಸ್ ಬಿ.ಸಂಕನೂರು, ಉಪಾಧ್ಯಕ್ಷೆ ಸುನಂದಾ ಬಾಕಳೆ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್, ನಗರ ಸಭೆ ವಿರೋದ ಪಕ್ಷದ ನಾಯಕ ಎಲ್.ಡಿ.ಚಂದಾವರಿ, ಜಿಲ್ಲಾಧಿಕಾರಿ ವೈಶಾಲಿ ಎಂಎಲ್, ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಭರತ್ ಎಸ್. ನಗರಸಭೆ ಪೌರಾಯುಕ್ತ ಪ್ರಶಾಂಶ ವರಗಪ್ಪನವರ, ಮಾರುತಿ ಬ್ಯಾಕೊಡ್ ಸೇರಿದಂತೆ ನಗರಸಭೆಯ ಸದ್ಯಸರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.