ಗದಗ:- ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಂತೆ ಗದಗನಲ್ಲಿ ಸಂಭ್ರಮದಿಂದ ರಂಜಾನ ಹಬ್ಬ ಆಚರಣೆ ಮಾಡಲಾಗಿದ್ದು, ನಗರದ ಡಂಬಳ ನಾಕಾ ಬಳಿ ಇರೋ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿದೆ.
BY Vijayendra: ರಾಜ್ಯದಲ್ಲಿರುವುದು ಜನವಿರೋಧಿ ಸರ್ಕಾರ – ಬಿವೈ ವಿಜಯೇಂದ್ರ!
ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಜರುಗಿದ್ದು, ಪ್ರಾರ್ಥನೆಯಲ್ಲಿ ಸಚಿವ ಎಚ್ ಕೆ ಪಾಟೀಲ್ ಭಾಗಿಯಾಗಿದರು. ಈ ವೇಳೆ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ.
ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ಕೋರಿದ್ದಾರೆ. ಬಿಸಿಲಿನ ತಾಪಕ್ಕೆ ಮುಸ್ಲಿಂ ಬಾಂಧವರು ಕೊಡೆಗಳ ಮೊರೆ ಹೋಗಿದ್ದಾರೆ. ಸಾವಿರಾರು ಜನ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಭಾಗಿಯಾಗಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)