ಯುವತಿಯರು ಮನಸ್ಸು ಮಾಡಿದರೆ, ಹುಡುಗರಿಂದ ಏನು ಬೇಕಾದರೂ ಮಾಡಿಸುತ್ತಾರೆ. ಇದು ಒಳ್ಳೆಯ ವಿಚಾರಕ್ಕೂ ಆಗಿರಬಹುದು. ಕೆಟ್ಟ ವಿಚಾರಕ್ಕೂ ಆಗಿರಬಹುದು ಎಂದು ನಟಿ ನಿವೇಥಾ ಪೇತುರಾಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯವಾಗಿ ಹೆಚ್ಚಿನ ರಿಲೇಷನ್ಷಿಪ್ಗಳಲ್ಲಿ, ನಿಜವಾಗಿ ಹೇಳಬೇಕೆಂದರೆ, ಯುವತಿಯರು ತುಂಬಾನೇ ಮ್ಯಾನ್ಯುಪ್ಯುಲೇಟಿವ್ ಆಗಿ ಇರುತ್ತಾರೆ. ಹುಡುಗರಿಗೆ ಇದು ಗೊತ್ತೇ ಆಗೋದಿಲ್ಲ. ಇದಕ್ಕೆ ದುರಾದೃಷ್ಟ ಎಂದೇ ಹೇಳಬೇಕು. ಇದು ಇರುವುದು ಇದೇ ರೀತಿ. ಈ ಪಾತ್ರ ಮಾಡುವಾಗ ಅದು ನನಗೆ ಗೊತ್ತಿರಲಿಲ್ಲ.
ಆದರೆ, ಈ ಸಿರೀಸ್ನ ಎಂಟೂ ಎಪಿಸೋಡ್ ನೋಡಿದ ಬಳಿಕ ಇದು ನನ್ನ ಅರಿವಿಗೆ ಬಂದಿದೆ. ಯುವತಿಯರು ಮನಸ್ಸು ಮಾಡಿದರೆ, ಹುಡುಗರಿಂದ ಏನು ಬೇಕಾದರೂ ಮಾಡಿಸುತ್ತಾರೆ. ಇದು ಒಳ್ಳೆಯ ವಿಚಾರಕ್ಕೂ ಆಗಿರಬಹುದು. ಕೆಟ್ಟ ವಿಚಾರಕ್ಕೂ ಆಗಿರಬಹುದು. ಜಗತ್ತನ್ನೇ ಗೆಲ್ಲಲು ಯುವತಿಯೊಬ್ಬಳು ಒಬ್ಬ ಹುಡುಗನಿಗೆ ಬೆಂಬಲವಾಗಿ ನಿಲ್ಲಬಹುದು. ಅದೇ ರೀತಿ, ಒಬ್ಬನನ್ನು ಸಾಯಿಸೋಕು ಕೂಡ ಯುವತಿಯರು ಕಾರಣವಾಗಬಹುದು ಎಂದು ನಿವೇಥಾ ಹೇಳಿದ್ದಾರೆ.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ಹೆಚ್ಚಿನವರು ನಿವೇಥಾ ಹೇಳಿದ ಮಾತನ್ನು ರೇಣುಕಾಸ್ವಾಮಿ ಮರ್ಡರ್ ಕೇಸ್ಗೆ ಲಿಂಕ್ ಮಾಡಿಸಿದ್ದಾರೆ. ಹಾಗೇನಾದರೂ ಪವಿತ್ರಾ ಗೌಡ, ಈ ವಿಚಾರವನ್ನು ದರ್ಶನ್ಗೆ ಹೇಳುವ ಬದಲು ಪೊಲೀಸ್ ಠಾಣೆಗೆ ಹೋಗಿ ವ್ಯವಸ್ಥಿತವಾಗಿ ದೂರು ದಾಖಲು ಮಾಡಿದ್ದರೆ, ಖಂಡಿತವಾಗಿ ಇಂದು ಇಂಥ ದಿನಗಳು ಬರುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಡುಗಿಯುರು ಪ್ರತಿ ವಿಚಾರವನ್ನೂ ಮ್ಯಾನ್ಯುಪ್ಯುಲೇಟಿವ್ ಆಗಿ ಯೋಚನೆ ಮಾಡ್ತಾರೆ. ಅದೇ ಕಾರಣಕ್ಕೆ ದರ್ಶನ್ ಇಂದು ಜೈಲುಪಾಲಾಗಬೇಕಾಗಿ ಬಂದಿದೆ. ಬಹುಶಃ ಜೈಲಲ್ಲಿರುವ ದರ್ಶನ್ಗೂ ಕೂಡ ಪವಿತ್ರಾ ಗೌಡ ಕಾರಣಕ್ಕಾಗಿಯೇ ತಾವು ಜೈಲಲಿದ್ದೇನೆ ಅನ್ನೋ ಅರಿವು ಕೂಡ ಇರಲಿಕ್ಕಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.