ಬೆಂಗಳೂರು: ಅಧಿಕಾರ, ಸ್ಥಾನಮಾನ ಮುಂದುವರಿಯಲು ಸಂಬಂತ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಲೀಡ್ ತಂದುಕೊಡುವಂತೆ ಸಚಿವರು, ನಿಗಮ -ಮಂಡಳಿ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ ಟಾಸ್ಕ್ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೊದಲ ಹಂತದಲ್ಲಿಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ವ್ಯಾಪ್ತಿಯ ಸಚಿವರು, ಶಾಸಕರು, ಮೇಲ್ಮನೆ ಸದಸ್ಯರು, ಮಾಜಿ ಶಾಸರು, ಜಿಲ್ಲಾಧ್ಯಕ್ಷರು ಮತ್ತಿತರ ಮುಖಂಡರ ಸಭೆಯಲ್ಲಿಈ ಸೂಚನೆ ನೀಡಿದ್ದಾರೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಸಂಬಂಧಪಟ್ಟ ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬದ್ಧತೆಯಿಂದ ಕೆಲಸ ಮಾಡಬೇಕು. ರಾಜ್ಯದಲ್ಲಿಪಕ್ಷ ಹೆಚ್ಚು ಸ್ಥಾನ ಗೆಲ್ಲಲೇಬೇಕಿದ್ದು, ಈ ಗುರಿಗೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ವೈಯಕ್ತಿಕ ಸಂಗತಿಗಳು ಪಕ್ಷದ ಕೆಲಸಕ್ಕೆ ಅಡ್ಡಿಯಾಗಬಾರದು. ವಿಶೇಷವಾಗಿ, ಸಚಿವರು ಮತ್ತು ನಿಗಮ -ಮಂಡಳಿಗಳ ಅಧ್ಯಕ್ಷಗಾದಿ ಹಿಡಿದವರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ. ಚುನಾವಣೆ ಬಳಿಕ ಮೌಲ್ಯಮಾಪನ ನಡೆಯಲಿದ್ದು, ಸಂಬಂಧಪಟ್ಟ ಕ್ಷೇತ್ರದಲ್ಲಿಪಕ್ಷಕ್ಕೆ ಲೀಡ್ ತಂದುಕೊಡದವರನ್ನು ಯಾವ ಮುಲಾಜೂ ಇಲ್ಲದೆ ಕುರ್ಚಿಯಿಂದ ಕೆಳಗೆ ಇಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.