ಕೋಲ್ಕತ್ತ:- ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಂಜುನಾಥ್ ನೋಡಿ ಜನರು ಮತ ಹಾಕಿದ್ದಾರಷ್ಟೆ, ಬಿಜೆಪಿಗಲ್ಲ – ಡಿಕೆ ಶಿವಕುಮಾರ್!
ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕರೆ ನೀಡಿದ್ದಾರೆ. ಜನಾದೇಶಕ್ಕಾಗಿ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದ ಅರ್ಪಿಸಿದ ಮಮತಾ, ಮೋದಿ ಅವರು ಎಲ್ಲ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ತೋರಿಸಿವೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಈ ಬಾರಿ ಬಹಳಷ್ಟು ಜನ ನನ್ನನ್ನು ಕಡಿಮೆ ಅಂದಾಜು ಮಾಡಿದ್ದಾರೆ. ನನಗೆ ಷೇರು ಮಾರುಕಟ್ಟೆ ಹೆಚ್ಚು ಅರ್ಥವಾಗುತ್ತಿಲ್ಲ, ಆದರೆ ನೀವು ಇಂದು ಷೇರು ಮಾರುಕಟ್ಟೆಯನ್ನು ನೋಡಿದ್ದೀರಾ? ”ಎಂದು ಕೇಳಿದ್ದಾರೆ.
ಪ್ರಧಾನಿಗೆ ಬಹುಮತ ಸಿಗದಿರುವುದು ಸಂತಸ ತಂದಿದೆ. ಈ ಬಾರಿ 400 ಸೀಟು ದಾಟುತ್ತೇವೆ ಎಂದು ಹೇಳಿದ್ದಕ್ಕೆ ಪ್ರಧಾನಿಯವರು ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ, ಕೂಡಲೇ ರಾಜೀನಾಮೆ ನೀಡಬೇಕು. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, “ನೀವು ಇಸಿಐ, ಸಿಬಿಐ ಅನ್ನು ನಿಯಂತ್ರಿಸಬಹುದು, ಆದರೆ ಇಂಡಿಯಾ ಬ್ಲಾಕ್ ನಿಮ್ಮನ್ನು ಕೆಳಗಿಳಿಸುತ್ತದೆ” ಎಂದು ಹೇಳಿದ್ದಾರೆ.