ಬಾಂಗ್ಲಾದೇಶ:- ಶಕ್ತಿ ಪೀಠದಲ್ಲಿ ಕಳ್ಳರ ಕರಾಮತ್ತು ತೋರಿದ್ದು, PM ಮೋದಿ ಉಡುಗೊರೆ ಕೊಟ್ಟಿದ್ದ ಚಿನ್ನದ ಕಿರೀಟ ಕಳ್ಳತನವಾಗಿರುವ ಘಟನೆ ಜರುಗಿದೆ.
ಸರ್ಕಾರಿ JOB ಸರ್ಚ್ ಮಾಡ್ತಿದ್ದೀರಾ!? ಡಿಜಿಟಲ್ ಇಂಡಿಯಾದಲ್ಲಿದೆ ಹಲವು ಉದ್ಯೋಗ, ಕೂಡಲೇ ಅಪ್ಲೈ ಮಾಡಿ!
ಬಾಂಗ್ಲಾದೇಶದ ಸಖ್ತೀರಾದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ಕೊಟ್ಟಿದ್ದ ಚಿನ್ನದ ಕಿರೀಟ ಕಳ್ಳತನವಾಗಿರುವ ಘಟನೆ ಜರುಗಿದೆ.
ಕಳ್ಳತನವಾಗಿರುವ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ದಾಖಲಾಗಿದೆ. ಅದರಲ್ಲಿ ಯುವಕನೊಬ್ಬ ಚಿನ್ನದ ಕಿರೀಟವನ್ನು ತೆಗೆದುಕೊಂಡು ಹೋಗ್ತಿರುವ ದೃಶ್ಯ ಬಹಿರಂಗಗೊಂಡಿವೆ. ಚಿನ್ನದ ಕಿರೀಟವನ್ನು ಪ್ರಧಾನಿ ನರೇಂದ್ರ ಮೋದಿ ಉಡುಗೊರೆಯಾಗಿ ನೀಡಿದ್ದರು.
ಬಾಂಗ್ಲಾದೇಶದ ಈ ಕಾಳಿ ದೇವಸ್ಥಾನದ ಕಿರೀಟಕ್ಕೂ ಪ್ರಧಾನಿ ಮೋದಿಗೂ ವಿಶೇಷ ಸಂಬಂಧ ಇದೆ. 2021ರಲ್ಲಿ ಮೋದಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ವೇಳೆ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಇದೀಗ ಅದೇ ಚಿನ್ನದ ಕಿರೀಟ ಕಳ್ಳತನವಾಗಿದೆ.
ಗುರುವಾರ ಮಧ್ಯಾಹ್ನ 2:47 ರಿಂದ 2:50 ರ ನಡುವೆ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಅರ್ಚಕ ದಿಲೀಪ್ ಕುಮಾರ್ ಬ್ಯಾನರ್ಜಿ ದೈನಂದಿನ ಪೂಜೆಯನ್ನು ಪೂರ್ಣಗೊಳಿಸಿದ ನಂತರ, ದೇವಾಲಯದ ಬೀಗಗಳನ್ನು ನಿರ್ವಹಣೆ ಮಾಡುವ ವ್ಯಕ್ತಿಗೆ ನೀಡಿದ್ದರು.
ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿ ರೇಖಾ ಸರ್ಕಾರ್, ಬೇರೆ ಕೆಲಸದಲ್ಲಿ ಬ್ಯುಸಿಯಿದ್ದ. ಈ ವೇಳೆ ಕಾಳಿ ಮಾತೆಯ ಚಿನ್ನದ ಕಿರೀಟ ಕಾಣೆಯಾಗಿದೆ.