ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬಹುತೇಕ ಒಣಹವೆ ಮುಂದುವರಿದಿದೆ.ಸೋಮವಾರವೂ ರಾಜ್ಯದ ಬಹುತೇಕ ಪ್ರದೇಶದಲ್ಲಿ ಒಣಹವೆ ಇರುವುದು ವರದಿಯಾಗಿತ್ತು. ಇನ್ನು ಉಳಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯಾಗಿರುವುದು ವರದಿಯಾಗಿಲ್ಲ.ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಈಶಾನ್ಯದ ರಾಜ್ಯಗಳಲ್ಲಿ ಗುಡುಗು-ಮಿಂಚು ಸಮೇತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಜೊತೆಗೆ ವರುಣ ಆರ್ಭಟ ಮಾಡುವ ಸಾಧ್ಯತೆಯಿದೆ. ಹೀಗಾಗಿ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಇಲಾಖೆ ಮಾಹಿತಿ ನೀಡಿದೆ ಎನ್ನಲಾಗಿದೆ.
Electricity Bill: ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ: ಪ್ರತಿ ಯೂನಿಟ್ ಮೇಲೆ 1.10 ರೂ. ಇಳಿಕೆ
ಬೆಂಗಳೂರಿನಲ್ಲಿ ವಾತಾವರಣ
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ನಿರ್ಮಲ ಆಕಾಶವಿರುತ್ತದೆ.ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ.ಇನ್ನು ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.ಅದೇ ರೀತಿ ಮುಂದಿನ 48 ಗಂಟೆಯ ಅವಧಿಯಲ್ಲೂ ಬೆಂಗಳೂರಿನಲ್ಲಿ ಇದೇ ವಾತಾವರಣ ಮುಂದುವರಿಯಲಿದೆಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.