ಬೆಂಗಳೂರು: ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಗೂ ಈ ಸಂಬಂಧ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈಗಾಗಲೇ ಪ್ರಕಟಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ್ ರಾವ್ ಆಯೋಗದ ಅಧ್ಯಕ್ಷರಾಗಿರಲಿದ್ದು, ಮೂವರು ಸದಸ್ಯರನ್ನು ನೇಮಕ ಮಾಡಲಾಗಿದೆ.
ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ನೀತಿ ಸಂಹಿತೆಯನ್ನು ವಾಪಸ್ ಪಡೆದಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳು ದಿನಾಂಕ 3/6/2024ರಂದು CM ಸಿದ್ದರಾಮಯ್ಯ ಮತ್ತು DCM ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು, 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
Famous Places: ಉಡುಪಿಯಲ್ಲಿ ನೀವು ಭೇಟಿ ನೀಡಲೇಬೇಕಾದ ಸ್ಥಳಗಳು ಯಾವುವು ಗೊತ್ತಾ..? ಈ ಸ್ಟೋರಿ ನೋಡಿ
ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಆಲಿಸಿದ ಸಿಎಂ ಮತ್ತು ಡಿಸಿಎಂ ಆದಷ್ಟು ಬೇಗನೇ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ವಾಪಸ್ ಪಡೆಯಲಾಗಿದೆ. ಆದರೆ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ಘೋಷಣೆಯಾಗಿತ್ತು.
ಗುರುವಾರ ಈ ಚುನಾವಣೆಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದ ಕಾರಣ ಜೂನ್ 13ರಂದು ನಡೆಯಬೇಕಿದ್ದ ಚುನಾವಣೆ ನಡೆಯುವುದಿಲ್ಲ. ಆದರೆ ಜೂನ್ 16ರ ತನಕ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆ ಬಳಿಕ ಸರ್ಕಾರ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಶೀಘ್ರದಲ್ಲಿ 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನಗೊಳ್ಳಲಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)