ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ 12 ರವರೆಗೆ HSRP ಅಳವಡಿಸಲು ಹೈಕೋರ್ಟ್ ಅವಕಾಶ ನೀಡಿದೆ
ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ!
ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಈಗಾಗಲೇ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕ ಹತ್ತಿರವಾಗ್ತಿದಂತೆ ವಾಹನ ಮಾಲೀಕರು ಮುಗಿಬಿದ್ದು ಆನ್ಲೈನ್ ಮೂಲಕ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಬುಕ್ಕಿಂಗ್ ಮಾಡಲು ಮುಂದಾಗ್ತಿದ್ದಾರೆ.
ಇದರಿಂದ ಸಾಕಷ್ಟು ನಕಲಿ ಕಂಪನಿಗಳು ಹುಟ್ಟಿಕೊಂಡಿದ್ದು ಅಸಲಿ ನಕಲಿ ಗೊತ್ತಾಗದೆ ವಾಹನ ಮಾಲೀಕರು ನಕಲಿ ಕಂಪನಿಗಳಲ್ಲಿ ಹಣ ಹಾಕಿ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಆರ್ಟಿಓ ಅಧಿಕಾರಿಗಳು ತನಿಖೆ ಮಾಡಿ ಫ್ಯೂಜನ್ ಅನ್ನೋ ನಕಲಿ ಕಂಪನಿ ವಿರುದ್ಧ ಹನುಮಂತನಗರ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಮಾತಾನಾಡಿದ ಟ್ರಾಫಿಕ್ ಎಕ್ಸ್ಪರ್ಟ್ ಶ್ರೀ ಹರಿ ಎರಡ್ಮೂರು ಬಾರಿ ಅವಕಾಶ ಕೊಟ್ಟರು ನಮ್ಮ ಜನರು ಯಾಕೆ ಅಳವಡಿಸಿಕೊಳ್ಳಲು ಮುಂದಾಗಿಲ್ಲ ಅಂತ ಗೊತ್ತಾಗ್ತಿಲ್ಲ ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.