ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು Gt vs RCB ಪಂದ್ಯ ನಡೆಯಲಿದೆ. ಆದರೆ ಬೆಂಗಳೂರಿನಾದ್ಯಂತ ಉತ್ತಮ ಮಳೆಯಾಗಿದ್ದು, ಹೀಗಾಗಿ ಶನಿವಾರ ಸಹ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವೆದರ್.ಕಾಮ್ ವರದಿ ಪ್ರಕಾರ ಬೆಂಗಳೂರಿನಲ್ಲಿ ಮಧ್ಯಾಹ್ನದ ಮೇಲೆ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಹೊಸಕೋಟೆ: ಇತಿಹಾಸ ಪ್ರಸಿದ್ಧ ಶ್ರೀ ಗಂಗಮ್ಮ ದೇವಿಯ ಮುಖ್ಯದ್ವಾರ ಉದ್ಘಾಟನೆ…!
ಇತ್ತ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ರಾತ್ರ 7.30 ರಿಂದ ಶುರುವಾಗಲಿದೆ. ಒಂದು ವೇಳೆ ಮಳೆ ಬಂದರೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನವು ಸಬ್ ಏರ್ ಸಿಸ್ಟಂ ಹೊಂದಿದ್ದು, ಇದು ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಸತತವಾಗಿ 1 ಗಂಟೆ ಮಳೆಯಾದರೆ ಮೈದಾನದ ಒಳಗಿರುವ ಸಬ್ ಏರ್ ಸಿಸ್ಟಂ ಮೂಲಕ 10 ರಿಂದ 15 ನಿಮಿಷದೊಳಗೆ ಗ್ರೌಂಡ್ ಅನ್ನು ಸಿದ್ಧಗೊಳಿಸಬಹುದು. ಅಲ್ಲದೆ ಸಬ್ ಏರ್ ಸಿಸ್ಟಂ ಕೊಳವೆಗಳ ಮೂಲಕ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಶೀಘ್ರದಲ್ಲೇ ಒಣಗಿಸುವ ವ್ಯವಸ್ಥೆ ಕೂಡ ಇದೆ.
ಹಾಗಾಗಿ ಸತತ ಮಳೆ ಬಂದರೂ ಪಂದ್ಯ ನಡೆಸಲು ಕೆಲವು ಗಂಟೆಗಳು ಲಭ್ಯವಾದರೂ ಓವರ್ ಕಡಿತಗಳೊಂದಿಗೆ ಆರ್ಸಿಬಿ-ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವು ನಡೆಯಲಿದೆ. ಹೀಗಾಗಿ ಇಂದು ಬೆಂಗಳೂರಿನಾದ್ಯಂತ ಮಳೆಯಾದರೂ RCB vs GT ಪಂದ್ಯ ನಡೆಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.