ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತ ಹಾಗೂ ರೇಷ್ಮೆ ಬೆಳೆಗಾರ ನವೀನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ಹಾಗೂ ಡಿಕೆ ಸಹೋದರರ ಮೇಲೆ ಕಿಡಿಕಾರಿದೆ.
ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಕರ್ನಾಟಕ, ಚುನಾವಣೆ ಸಮಯದಲ್ಲಿ ಕಾಂಗ್ರೆಸ್ನ ಗೂಂಡಾಗಳು ಸಕ್ರಿಯಗೊಂಡಿದ್ದು ಅಲ್ಲದೆ, ಅವರನ್ನು ಮಜಾವಾದಿ ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ. ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ನವೀನ್ ಮೇಲೆ ಕಾಂಗ್ರೆಸ್ನ ಗೂಂಡಾ ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಆತನನ್ನು ಬಂಧಿಸದೆ ಸಣ್ಣ ಕೇಸ್ ಹಾಕಿ ರಾಜಾರೋಷವಾಗಿ ಬೀದಿಗೆ ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಆ ದಿನಗಳಂತೆ ಚುನಾವಣೆ ಗೆಲ್ಲಲು ಗೂಂಡಾಗಿರಿ ಮಾಡುತ್ತಿರುವ ಅಣ್ಣ – ತಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಡಿಕೆ ಸಹೋದರರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿರುವ ಬಿಜೆಪಿ, ಕೂಡಲೇ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಂಡು ನಿಷ್ಪಕ್ಷಪಾತವಾಗಿ ರಾಜ್ಯದಲ್ಲಿ ಚುನಾವಣೆ ನಡೆಯಲು ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ ತುಂಬಬೇಕಿದೆ ಎಂದು ಆಗ್ರಹಿಸಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)