ಬೆಂಗಳೂರು: ರಾಜ್ಯ ಸರ್ಕಾರವಪ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಹಣ ನಿಗದಿಪಡಿಸಿದೆ.
ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯ, ಪ್ರವಾಹದಿಂದ ಗೃಹೋಪಯೋಗಿ ವಸ್ತು ಕಳೆದುಕೊಂಡರೆ ಅಂತವರಿಗೂ ಪರಿಹಾರ ನೀಡಲಾಗುತ್ತಿದೆ.
ಈ ಅತೀ ಸಣ್ಣ ಪ್ರಮಾಣದಲ್ಲಿ ಮನೆಗೆ ಹಾನಿಯಾಗಿದ್ದರೆ 6,500 ಸಾವಿರ ರೂ. ಮಧ್ಯಮ ಪ್ರಮಾಣದ ಮನೆಗೆ ಹಾನಿಯಾಗಿದ್ದರೆ 25 ಸಾವಿರ, ಶೇ.75ರಷ್ಟು ಮನೆ ಹಾನಿಯಾಗಿದ್ದರೆ 50 ಸಾವಿರ ಮತ್ತು ಮನೆಗೆ ಸಂಪೂರ್ಣ ಹಾನಿಯಾಗಿದ್ದರೆ 1.20 ಲಕ್ಷ ರೂ. ಪರಿಹಾರ ದರ ನಿಗದಿ ಮಾಡಲಾಗಿದೆ.
ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯ ದೇವರಾಜ ಅರಸು ವಸತಿ ಯೋಜನೆ ಅಡಿ ಮನೆ ಹಂಚಿಕೆ ಪತ್ರ ವಿತರಣೆ, ಮನೆ ಹಾನಿ ಪ್ರಮಾಣ ಪರಿಶೀಲನೆಗೂ ನಿಗದಿಯ ಮಾರ್ಗಸೂಚಿ ಅನುಸರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅತಿವೃಷ್ಟಿ, ಪ್ರವಾಹದಿಂದ ಮನೆಯ ಗೋಡೆಗಳೊಂದಿಗೆ ಮೇಲ್ಛಾವಣಿ ಕುಸಿತ ,,ಮನೆಸmafdugak3 Fಗಳನ್ನು ಸಂಫೂರ್ಣ
€.#ನೆಯೆಂದು ಪರಿಗಣಿಲಾಗುತ್ತದೆ.
ಮನೆಹಾನಿಯ ಪ್ರಮಾಣವನ್ನು ಗ್ರಾಮ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಇವರುಗಳ ಜಂಟಿಯಾಗಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸಬೇಕು. ನಿಗದಿಪಡಿಸಿರುವ ಕಾಲಮಿತಿಯೊಳಗೆ ನಿಯಮಾನುಸಾರ ಅರ್ಹ ಸಂತ್ರಸ್ಥರಿಗೆ ಪರಿಹಾರ ಪಾವತಿಸಲು ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ.